ಚಾಮರಾಜನಗರ: ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶ
ಚಾಮರಾಜನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶವಾಗಿದೆ. ಅಷ್ಟೇ ಅಲ್ಲದೆ, ಆಸ್ತಿಪಾಸ್ತಿಗೂ ಹಾನಿಯಾಗಿದೆ. ಅನೇಕ ರೈತರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಚಾಮರಾಜನಗರ ಭಾರಿ ಮಳೆ ಹಾಗೂ ಬಾಳೆ ತೋಟ ನಾಶವಾಗಿರುವುದಕ್ಕೆ ಸಂಬಂಧಿಸಿದ ವಿಡಿಯೋ ಇಲ್ಲಿದೆ ನೋಡಿ.
ಚಾಮರಾಜನಗರ, ಮೇ 1: ಚಾಮರಾಜನಗರ ತಾಲೂಕಿನ ಪುಣಜೂರು ಗ್ರಾಮದಲ್ಲಿ ಬುಧವಾರ ತಡರಾತ್ರಿ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ರೈತ ಸಿದ್ದ ನಾಯ್ಕ ಎಂಬುವರಿಗೆ ಸೇರಿದ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಗಾಳಿಯ ರಭಸಕ್ಕೆ ತಗಡಿನ ಶೀಟ್ಗಳು ಹಾರಿ ಹೋಗಿವೆ. ನಷ್ಟವಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ರೈತ ಮನವಿ ಮಾಡಿದ್ದಾರೆ.