AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶ

ಚಾಮರಾಜನಗರ: ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶ

ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: May 01, 2025 | 8:45 AM

ಚಾಮರಾಜನಗರದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ 4 ಎಕರೆ ಬಾಳೆ ತೋಟ ನಾಶವಾಗಿದೆ. ಅಷ್ಟೇ ಅಲ್ಲದೆ, ಆಸ್ತಿಪಾಸ್ತಿಗೂ ಹಾನಿಯಾಗಿದೆ. ಅನೇಕ ರೈತರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಚಾಮರಾಜನಗರ ಭಾರಿ ಮಳೆ ಹಾಗೂ ಬಾಳೆ ತೋಟ ನಾಶವಾಗಿರುವುದಕ್ಕೆ ಸಂಬಂಧಿಸಿದ ವಿಡಿಯೋ ಇಲ್ಲಿದೆ ನೋಡಿ.

ಚಾಮರಾಜನಗರ, ಮೇ 1: ಚಾಮರಾಜನಗರ ತಾಲೂಕಿನ ಪುಣಜೂರು ಗ್ರಾಮದಲ್ಲಿ ಬುಧವಾರ ತಡರಾತ್ರಿ ಸುರಿದ ಗಾಳಿ ಸಹಿತ ಭಾರಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ರೈತ ಸಿದ್ದ ನಾಯ್ಕ ಎಂಬುವರಿಗೆ ಸೇರಿದ ಬಾಳೆ ಬೆಳೆ ಸಂಪೂರ್ಣ ನಾಶವಾಗಿದೆ. ಗಾಳಿಯ ರಭಸಕ್ಕೆ ತಗಡಿನ ಶೀಟ್​​ಗಳು ಹಾರಿ ಹೋಗಿವೆ. ನಷ್ಟವಾದ ಬೆಳೆಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ರೈತ ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ