AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಚಾಮರಾಜನಗರ: ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ; ಅದೃಷ್ಟವಶಾತ್ ಪ್ರಯಾಣಿಕರು ಪಾರು

ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 18, 2023 | 4:26 PM

Share

ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್, ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ಏಕಾಎಕಿ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೇತ್ತ ಚಾಲಕ, ಬಸ್ ನಿಲ್ಲಿಸಿದ್ದಾರೆ. ಕೂಡಲೇ 50ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಚಾಮರಾಜನಗರ, ನ.18: ಶಕ್ತಿಯೋಜನೆ ಹಿನ್ನಲೆ ಹಳೆ ಬಸ್​ಗಳನ್ನು ಸಾರಿಗೆ ಇಲಾಖೆ ರಸ್ತೆಗೆ ಇಳಿಸುತ್ತಿದೆ. ಇದರ ಬೆನ್ನಲ್ಲೇ ತಾಂತ್ರಿಕ ದೋಷ ಕಾಣಿಸಿಕೊಳ್ಳುತ್ತಿದೆ. ಅದರಂತೆ ಇದೀಗ ಯಳಂದೂರಿನಿಂದ ಬಿಳಿಗಿರಿ ರಂಗನ ಬೆಟ್ಟಕ್ಕೆ ಹೊರಟಿದ್ದ ಸರ್ಕಾರಿ ಬಸ್, ಚಾಮರಾಜನಗರ (Chamarajanagar) ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಅರಣ್ಯದ ರಸ್ತೆಯಲ್ಲಿ ಏಕಾಎಕಿ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಚ್ಚೇತ್ತ ಚಾಲಕ, ಬಸ್ ನಿಲ್ಲಿಸಿದ್ದಾರೆ. ಕೂಡಲೇ 50ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ತಕ್ಷಣವೇ ಚಾಲಕ ಹಾಗೂ ನಿರ್ವಾಹಕ ಬಸ್​ನಲ್ಲಿದ್ದ ಪ್ರಯಾಣಿಕರ ಸಹಾಯದಿಂದ ಬೆಂಕಿ ನಂದಿಸಲು ಮುಂದಾಗಿದ್ದು, ಅಷ್ಟರಲ್ಲಿ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಆಗಿಲ್ಲ, ಈ ಕುರಿತು ಯಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Nov 18, 2023 04:26 PM
Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More