ಮದುವೆಗೆ ಹೆಣ್ಣು ಸಿಗ್ತಿಲ್ಲವೆಂದು ಕುಡಿದ ಮತ್ತಿನಲ್ಲಿ ಹೈಟೆನ್ಷನ್ ವಿದ್ಯುತ್​ ಕಂಬ ಏರಿದ ಯುವಕ: ಆಮೇಲೇನಾಯ್ತು ನೋಡಿ

Edited By:

Updated on: Mar 18, 2025 | 2:57 PM

ಮದ್ಯಪಾನಿಗಳು ಕುಡಿದ ಮತ್ತಿನಲ್ಲಿ ಚರಂಡಿಯಲ್ಲಿ ಬೀಳುವುದು, ರಸ್ತೆಯಲ್ಲಿ ಮಲಗುವುದನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಕುಡಿದು ಹೈಟೆನ್ಷನ್ ವಿದ್ಯುತ್ ಕಂಬ ಏರಿದ್ದಾನೆ. ಇಳಿಯಲು ಯತ್ನಿಸುವಾಗ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಎಂಬಲ್ಲ ಘಟನೆ ಸಂಭವಿಸಿದೆ.

ಚಾಮರಾಜನಗರ, ಮಾರ್ಚ್ 18: ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಕೊಳ್ಳೇಗಾಲ ತಾಲೂಕಿನ ಟಿ.ಸಿ.ಹುಂಡಿ ಬಳಿ ನಡೆದಿದೆ. ವಿದ್ಯುತ್ ಕಂಬದಿಂದ ಇಳಿಯುವಾಗ ವೈರ್ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ. ವಿದ್ಯುತ್ ಕಂಬ ಏರಿದ್ದನ್ನು ನೋಡಿ ಅಲ್ಲಿಗೆ ಧಾವಿಸಿದ್ದ ಸ್ಥಳೀಯರು ಕಂಬದಿಂದ ಕೆಳಗಿಳಿಯುವಂತೆ ಒತ್ತಾಯಿಸಿದ್ದರು. ಆಗ ಆತ ಇಳಿಯಲು ಮುಂದಾಗಿದ್ದಾನೆ. ಇಳಿಯುವ ವೇಳೆ ವಿದ್ಯುತ್ ತಂತಿ ತಗುಲಿ ಮಸಣಶೆಟ್ಟಿ ಸಾವಿಗೀಡಾಗಿದ್ದಾನೆ.

ತಾಯಿ ಕಣ್ಣೆದುರೇ ದಾರುಣ ಸಾವು

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಮಸಣಶೆಟ್ಟಿ ಕುಡಿತದ ದಾಸನಾಗಿದ್ದ ಎನ್ನಲಾಗಿದೆ. ಮಸಣಶೆಟ್ಟಿಯದ್ದು ಚಿಕ್ಕಮನೆ ಹಾಗೂ ಆಸ್ತಿ ಜಮೀನು ಇಲ್ಲ ಎಂಬ ಕಾರಣ ಎರಡು ಬಾರಿ ನೋಡಿ ಬಂದ ಹೆಣ್ಣಿನ ಕಡೆಯವರು ತಿರಸ್ಕರಿಸಿದ್ದರು. ಇದರಿಂದ ಮಾನಸಿಕ ಖಿನ್ನತೆಗೆ ಒಳಾಗಿದ್ದ ಮಸಣಶೆಟ್ಟಿ ಕುಡಿತದ ದಾಸನಾಗಿದ್ದ. ಇಂದು ಬೆಳಗ್ಗೆ ಹೈ ಟೆನ್ಷನ್ ಕಂಬ ಏರಿದ್ದ. ತಾಯಿಯ ಕಣ್ಣೆದುರೇ ದಾರುಣವಾಗಿ ಮೃತಪಟ್ಟಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 18, 2025 12:15 PM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More