AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ದಸರಾ ಮಹೋತ್ಸವ: ಬರೋಬ್ಬರಿ 13 ಲೀಟರ್​, 200 ಗ್ರಾಂ ಹಾಲು ಕರೆದ ಯುವ ರೈತ; ಇಲ್ಲಿದೆ ವಿಡಿಯೋ

ಚಾಮರಾಜನಗರ ದಸರಾ ಮಹೋತ್ಸವ: ಬರೋಬ್ಬರಿ 13 ಲೀಟರ್​, 200 ಗ್ರಾಂ ಹಾಲು ಕರೆದ ಯುವ ರೈತ; ಇಲ್ಲಿದೆ ವಿಡಿಯೋ

ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 18, 2023 | 7:57 PM

Share

ಅಧಿಕ ಹಾಲು ಕರೆಯುವ ಸ್ಪರ್ಧೆಯಲ್ಲಿ ಹತ್ತಾರು ರೈತರು ಭಾಗಿಯಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ್ ಅವರು ಹಾಲು ಕರೆಯುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಇನ್ನು ಈ ಸ್ಫರ್ಧೆಯಲ್ಲಿ ಬರೋಬ್ಬರಿ 13 ಲೀಟರ್​ 200 ಗ್ರಾಂ ಹಾಲು ಕರೆಯು ಮೂಲಕ ಮೇಲಾಜಿಪುರದ ಯುವ ರೈತ ನವೀನ್ ಎಂಬುವವರು ಮೊದಲ ಸ್ಥಾನ ಪಡೆದು, 15 ಸಾವಿರ ರೂಪಾಯಿ ನಗದು ಬಹುಮಾನ ಪಡೆದರು

ಚಾಮರಾಜನಗರ, ಅ.18: ಜಿಲ್ಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಇದರ ಮೆರುಗು ಹೆಚ್ಚಿಸಲು ಇದೇ ಮೊದಲ ಬಾರಿಗೆ  ಚಾಮರಾಜನಗರ (Chamarajanagar) ದಲ್ಲಿ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಅಧಿಕ ಹಾಲು ಕರೆಯುವ ಸ್ಪರ್ಧೆಯಲ್ಲಿ ಹತ್ತಾರು ರೈತರು ಭಾಗಿಯಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ್ ಅವರು ಹಾಲು ಕರೆಯುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಇನ್ನು ಈ ಸ್ಫರ್ಧೆಯಲ್ಲಿ ಬರೋಬ್ಬರಿ 13 ಲೀಟರ್​ 200 ಗ್ರಾಂ ಹಾಲು ಕರೆಯು ಮೂಲಕ ಮೇಲಾಜಿಪುರದ ಯುವ ರೈತ ನವೀನ್ ಎಂಬುವವರು ಮೊದಲ ಸ್ಥಾನ ಪಡೆದು, 15 ಸಾವಿರ ರೂಪಾಯಿ ನಗದು ಬಹುಮಾನ ಪಡೆದರೆ, ಕಾಗಲವಾಡಿ ರೈತ ಮುರುಗೇಶ್  ಅವರು 8 ಲೀಟರ್​ 300 ಗ್ರಾಂ ಹಾಲು ಕರೆದು, ಎರಡನೇ ಬಹುಮಾನ 10 ಸಾವಿರ ನಗದು ತಮ್ಮದಾಗಿಸಿಕೊಂಡರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More