ಒಂಟಿ ದಂತದ ಕಾಡಾನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣು: ಒಂದೇ ಏಟಿಗೆ ಕಬ್ಬಿಣದ ಗೇಟ್ ಛಿದ್ರ
ಚಾಮರಾಜನಗರದ ಗಡಿಗ್ರಾಮವಾದ ತಮಿಳುನಾಡಿನ ಅರಳವಾಡಿ ಬಳಿ ಒಂಟಿ ದಂತದ ಕಾಡಾನೆಯ ಹಾವಳಿ ಹೆಚ್ಚಾಗಿದೆ. ಕಬ್ಬಿಣದ ಗೇಟ್ ಮುರಿದು ತೋಟಗಳಿಗೆ ನುಗ್ಗುವ ಈ ಆನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳೆಗಳನ್ನು ನಾಶಪಡಿಸಿ, ಗ್ರಾಮಸ್ಥರಿಗೆ ಆತಂಕ ಸೃಷ್ಟಿಸುತ್ತಿರುವ ಈ ಕಾಡಾನೆ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯದ ಜನರಿಗೂ ತಲೆನೋವಾಗಿ ಪರಿಣಮಿಸಿದೆ.
ಚಾಮರಾಜನಗರ, ಮಾರ್ಚ್ 15: ಒಂಟಿ ದಂತದ ಆನೆ ಹಾವಳಿಗೆ ಕಾಡಂಚಿನ ಗ್ರಾಮಸ್ಥರು ಹೈರಾಣಾಗಿದ್ದಾರೆ. ಒಂಟಿ ಸಲಗನ ಏಟಿಗೆ ಕಬ್ಬಿಣದ ಗೇಟ್ ಛಿದ್ರವಾದ ಘಟನೆ ಚಾಮರಾಜನಗರದ ಗಡಿಗ್ರಾಮ ತಮಿಳುನಾಡಿನ ಅರಳವಾಡಿಯಲ್ಲಿ ನಡೆದಿದೆ. ವಾಹನವೊಂದು ಬರುತ್ತಿದ್ದನ್ನು ಕಂಡ ಒಂಟಿದಂತದ ಕಾಡಾನೆ ಸಲೀಸಾಗಿ ಗೇಟ್ ಮುರಿದು ತೋಟಕ್ಕೆ ನುಗ್ಗಿ ಬೆಳೆ ಮೇಯ್ದಿದೆ. ಕಾಡಾನೆ ಗೇಟ್ ಮುರಿದು ಒಳನುಗ್ಗುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಸದ್ಯ ಕರ್ನಾಟಕ ಮತ್ತು ತಮಿಳುನಾಡಿನ ಜನರಿಗೆ ಕಾಡಾನೆ ತಲೆನೋವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us