ಚಾಮರಾಜನಗರ: 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಗ್ರಾಮಕ್ಕೆ ಲಗ್ಗೆ, ಬೆಚ್ಚಿಬೀಳಿಸುವ ವಿಡಿಯೋ ಇಲ್ಲಿದೆ ನೋಡಿ
ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ರೈತರು ಕಾಡಾನೆ ಭೀತಿಯಿಂದ ಜಮೀನುಗಳಿಗೆ ತೆರಳದೆ ಮನೆಯಲ್ಲೇ ಉಳಿಯುವಂತಾಗಿದೆ. ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ರೈತರನ್ನು ಬೆಚ್ಚಿಬೀಳಿಸಿದೆ. ಕಾಡಾನೆ ಹಿಂಡು ಗ್ರಾಮದಲ್ಲಿ ಸಂಚರಿಸುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ ನೋಡಿ.
ಚಾಮರಾಜನಗರ, ಡಿಸೆಂಬರ್ 3: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಕಳೆದ ಒಂದು ವಾರದಿಂದ ಆಗಾಗ ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಈಗ ಆನೆಗಳ ಹಿಂಡು ಅಲ್ಲೇ ಬೀಡುಬಿಟ್ಟಿರುವುದು ರೈತರಲ್ಲಿ ಭೀತಿಗೆ ಕಾರಣವಾಗಿದೆ. ಗಜಪಡೆ ಹೊಲಗಳ ಸುತ್ತಮುತ್ತಲೇ ತಿರುಗಾಡುತ್ತಿರುವುದರಿಂದ ಜಮೀನಿಗೆ ತೆರಳಲು ಭಯಗೊಂಡ ರೈತರು ಮನೆಯಲ್ಲೇ ಉಳಿಯುವಂತಾಗಿದೆ. ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿನೊಳಕ್ಕೆ ಓಡಿಸುವಂತೆ ಮತ್ತು ಗ್ರಾಮಗಳಿಗೆ ನುಗ್ಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಗೆ ರೈತರು ಮನವಿ ಮಾಡಿದ್ದಾರೆ.
Latest Videos
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
