ಚಾಮರಾಜನಗರ: 40ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಗ್ರಾಮಕ್ಕೆ ಲಗ್ಗೆ, ಬೆಚ್ಚಿಬೀಳಿಸುವ ವಿಡಿಯೋ ಇಲ್ಲಿದೆ ನೋಡಿ

Edited By:

Updated on: Dec 03, 2025 | 8:14 AM

ಚಾಮರಾಜನಗರ ಜಿಲ್ಲೆಯ ತಮಿಳುನಾಡು ಗಡಿ ಭಾಗದ ರೈತರು ಕಾಡಾನೆ ಭೀತಿಯಿಂದ ಜಮೀನುಗಳಿಗೆ ತೆರಳದೆ ಮನೆಯಲ್ಲೇ ಉಳಿಯುವಂತಾಗಿದೆ. ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ರೈತರನ್ನು ಬೆಚ್ಚಿಬೀಳಿಸಿದೆ. ಕಾಡಾನೆ ಹಿಂಡು ಗ್ರಾಮದಲ್ಲಿ ಸಂಚರಿಸುತ್ತಿರುವ ಭಯಾನಕ ವಿಡಿಯೋ ಇಲ್ಲಿದೆ ನೋಡಿ.

ಚಾಮರಾಜನಗರ, ಡಿಸೆಂಬರ್ 3: ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಅರಳವಾಡಿ ಹಾಗೂ ತಾಳವಾಡಿ ಗ್ರಾಮಗಳ ಬಳಿ 40ಕ್ಕೂ ಹೆಚ್ಚು ಕಾಡಾನೆಗಳು ಕಳೆದ ಒಂದು ವಾರದಿಂದ ಆಗಾಗ ಕಾಣಿಸಿಕೊಳ್ಳುತ್ತಿವೆ. ಅಲ್ಲದೆ, ಈಗ ಆನೆಗಳ ಹಿಂಡು ಅಲ್ಲೇ ಬೀಡುಬಿಟ್ಟಿರುವುದು ರೈತರಲ್ಲಿ ಭೀತಿಗೆ ಕಾರಣವಾಗಿದೆ. ಗಜಪಡೆ ಹೊಲಗಳ ಸುತ್ತಮುತ್ತಲೇ ತಿರುಗಾಡುತ್ತಿರುವುದರಿಂದ ಜಮೀನಿಗೆ ತೆರಳಲು ಭಯಗೊಂಡ ರೈತರು ಮನೆಯಲ್ಲೇ ಉಳಿಯುವಂತಾಗಿದೆ. ಕಾಡಾನೆಗಳನ್ನು ಸುರಕ್ಷಿತವಾಗಿ ಕಾಡಿನೊಳಕ್ಕೆ ಓಡಿಸುವಂತೆ ಮತ್ತು ಗ್ರಾಮಗಳಿಗೆ ನುಗ್ಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಗೆ ರೈತರು ಮನವಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More