ವರುಣಾರ್ಭಟಕ್ಕೆ ಮನೆಗಳಿಗೆ ನುಗ್ಗಿದ ನೀರು: ದವಸ ಧಾನ್ಯಗಳು ಸೇರಿ ಗೃಹೋಪಯೋಗಿ ವಸ್ತುಗಳು ಜಲಾಹುತಿ

Edited By:

Updated on: May 31, 2026 | 8:12 AM

ಚಾಮರಾಜನಗರದ ಪೊನ್ನಾಚಿ ಗ್ರಾಮದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿದ್ದು, ದವಸ ಧಾನ್ಯಗಳು ಜಲಾಹುತಿಯಾಗಿವೆ. ಕಾಲುವೆ ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದ ಶಂಕರ, ಶಿವಮ್ಮ ಎಂಬುವರ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಕುಟುಂಬಸ್ಥರು ಕಂಗಾಲಾಗಿದ್ದಾರೆ.

ಚಾಮರಾಜನಗರ, ಮೇ 31: ಜಿಲ್ಲೆಯ ಹಲವೆಡೆ ಮಳೆ ಆರ್ಭಟ ಮುಂದುವರಿದಿದ್ದು, ವರುಣನ ಅವಾಂತರಕ್ಕೆ ಪೊನ್ನಾಚಿ ಗ್ರಾಮದಲ್ಲಿ ಹಲವು ಮನೆಗಳಿಗೆ ಮಳೆ ನೀರು ನುಗ್ಗಿದ ಘಟನೆ ನಡೆದಿದೆ. ಮನೆಗಳ ಪಕ್ಕದ ಕಾಲುವೆಯಿಂದ ನದಿಯಂತೆ ಮಳೆ ನೀರು ಹರಿದು ಬಂದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು ಸೇರಿ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಪೊನ್ನಾಚಿ ಗ್ರಾಮದ ಶಂಕರ, ಶಿವಮ್ಮ ಎಂಬುವರ ಮನೆಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದವರು ಕಂಗಾಲಾಗಿದ್ದಾರೆ. ಕಾಲುವೆ ಸ್ವಚ್ಛಗೊಳಿಸದ ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us