ಭಾರತೀಯ ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಪೂಜೆ ವೇಳೆ ಬಲಭಾಗದಿಂದ ಹೂ ನೀಡಿದ ದೇವರು

Edited By:

Updated on: May 08, 2025 | 11:14 AM

ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ತುಂಬಲು ಚಾಮರಾಜನಗರದ ರಾಮಸಮುದ್ರದಲ್ಲಿರುವ ಶ್ರೀ ಲಕ್ಷ್ಮೀ ಜನಾರ್ಧನ ಸ್ವಾಮಿ ದೇವಾಲಯ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಮಾಡಲಾಯಿತು. ಇದೇ ವೇಳೆ ದೇವರ ಮೇಲಿದ್ದ ಬಲಭಾಗದ ಹೂವು ಕೆಳಗೆ ಬಿದ್ದು ಶುಭ ಶಕುನ ಕಾಣಿಸಿತು. ಇದು ಭಕ್ತರ ಸಂಭ್ರಮಕ್ಕೆ ಕಾರಣವಾಯಿತು.

ಚಾಮರಾಜನಗರ, ಮೇ 8: ಪಾಕಿಸ್ತಾನದ ನೆಲಕ್ಕೆ ನುಗ್ಗಿ ಉಗ್ರರ ನೆಲೆಯನ್ನು ಉಡೀಸ್ ಮಾಡಲು ಭಾರತೀಯ ಸೇನೆಗೆ ಬಲ ತುಂಬುವ ನಿಟ್ಟಿನಲ್ಲಿ ಚಾಮರಾಜನಗರದ ರಾಮಸಮುದ್ರದಲ್ಲಿರುವ ಲಕ್ಷ್ಮೀ ಜನಾರ್ದನ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಇದೇ ವೇಳೆ, ಅರ್ಚಕ ಅನಂತ ಪ್ರಸಾದ್ ವಿಶೇಷ ಪ್ರಾರ್ಥನೆ ಮಾಡಿದರು. ಆ ಸಂದರ್ಭದಲ್ಲಿ ಬಲಭಾಗದಿಂದ ದೇವರು ಹೂವನ್ನು ನೀಡಿದ್ದು, ಭಕ್ತರಲ್ಲಿ ಹರ್ಷ ಮೂಡಿಸಿತು. ದೇವರು ಬಲಭಾಗದಿಂದ ಹೂ ನೀಡಿ ಸೇನೆಗೆ ಶಕ್ತಿ ತುಂಬಿದ್ದಾನೆ ಎಂದು ಭಕ್ತರು ಅಭಿಪ್ರಾಯಪಟ್ಟರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More