AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಚಾಮರಾಜನಗರ: ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!

ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: May 09, 2026 | 8:06 AM

Share

ಕರ್ನಾಟಕ-ತಮಿಳುನಾಡು ಸಂಪರ್ಕ ಕಲ್ಪಿಸುವ ಹನೂರಿನ ಒಡೆಯರಪಾಳ್ಯದ ರಾಜ್ಯ ಹೆದ್ದಾರಿ ಸಂಪೂರ್ಣ ಗುಂಡಿಮಯವಾಗಿದ್ದು, ಮಳೆ ನೀರು ನಿಂತು ಕೆರೆಯಂತಾಗಿದೆ. ರಸ್ತೆ ಅಧ್ವಾನದಿಂದ ಸವಾರರು ಪರದಾಡುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ಕೆಸರುಮಯವಾದ ರಸ್ತೆಯಲ್ಲಿ ವಾಹನ ಸವಾರರು ಪರದಾಡುತ್ತಿರುವ ವಿಡಿಯೋ ಇಲ್ಲಿದೆ ನೋಡಿ.

ಚಾಮರಾಜನಗರ, ಮೇ 9: ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯದಲ್ಲಿ ರಾಜ್ಯ ಹೆದ್ದಾರಿಯ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರತಿದಿನ ನರಕಯಾತನೆ ಅನುಭವಿಸುತ್ತಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ಈ ಪ್ರಮುಖ ರಸ್ತೆಯಲ್ಲಿ ಶುಕ್ರವಾರ ಸುರಿದ ಸಣ್ಣ ಮಳೆಗೆ ನೀರು ನಿಂತು ರಸ್ತೆಯೇ ಕಾಣದಂತಾಗಿದೆ. ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆಯೇ ರಸ್ತೆ ಇದೆಯೋ ಎಂಬ ಅನುಮಾನ ಮೂಡುವಂತೆ ಈ ಮಾರ್ಗ ಅಧ್ವಾನಗೊಂಡಿದೆ. ಅಂತರರಾಜ್ಯ ಸಂಪರ್ಕ ಕಲ್ಪಿಸುವ ಇಂತಹ ಮಹತ್ವದ ರಸ್ತೆಯ ಗುಂಡಿಗಳಿಂದಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ಮತ್ತು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕೂಡಲೇ ರಸ್ತೆ ದುರಸ್ತಿಗೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us