ಚಾಮರಾಜನಗರ: ಪೊಲೀಸರು ಲಾಠಿ ಹಿಡಿದು ಬಂದ್ರೂ ಕ್ಯಾರೇ ಅನ್ನದ ಮಂಗಳ ಮಖಿಯರು, ವಿಡಿಯೋ ವೈರಲ್

ಚಾಮರಾಜನಗರದಲ್ಲಿ ನಡೆದ ಮಂಗಳಮುಖಿಯರ ಗ್ಯಾಂಗ್​ ವಾರ್ ಸಂಬಂಧಿತ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಲಾಠಿ ಹಿಡಿದು ಬಂದರೂ ಜಪ್ಪಯ್ಯ ಅನ್ನದ ಮಂಗಳಮುಖಿಯರು ಗಲಾಟೆ ಮುಂದುವರಿಸಿದ್ದಾರೆ. ಆಮೇಲೇನಾಯ್ತು? ಇಲ್ಲಿದೆ ವಿಡಿಯೋ, ನೋಡಿ.

ಚಾಮರಾಜನಗರ, ನವೆಂಬರ್ 12: ಚಾಮರಾಜನಗರ ತಮಿಳುನಾಡು ರಸ್ತೆಯಲ್ಲಿ ಮಂಗಳ ಮಖಿಯರ ಗ್ಯಾಂಗ್ ವಾರ್ ಪ್ರಕರಣ ಸಂಬಂಧಿತ ಇನ್ನಷ್ಟು ವಿಡಿಯೋಗಳೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಗಲಾಟೆಯಿಂದ ತಮಿಳುನಾಡು ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ನಿಯಂತ್ರಿಸಲು ಪೊಲೀಸರು ಬಂದಿದ್ದಾರೆ. ಆದರೆ, ಪೊಲೀಸರು ಕೈಯಲ್ಲಿ ಲಾಠಿ ಹಿಡಿದು ಬಂದರೂ ಬಗ್ಗದ ತೃತೀಯ ಲಿಂಗಿಯರು, ಮಾರಮಾರಿ ನಡೆಸಿದ್ದಾರೆ.

ಸರಿ ಸುಮಾರು 30 ಕ್ಕೂ ಹೆಚ್ಚು ತೃತೀಯ ಲಿಂಗಿಯರು ಮೈಸೂರಿನಿಂದ ಟಿಟಿ ವಾಹನದಲ್ಲಿ ಬಂದು ಗಲಾಟೆ ಮಾಡಿದ್ದಾರೆ. ಗಲಾಟೆ ಹಿನ್ನಲೆ ಸ್ಥಳೀಯರು ಪೊಲೀಸರಿಗೆ ಕರೆ ಮಾಡಿದ್ದರು. ಮತ್ತೊಂದೆಡೆ, ‘ಟಿವಿ9’ ವರದಿ ಪ್ರಸಾರ ಬಳಿಕ, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಲಾಟೆ ಮಾಡಿದ ಮಂಗಳಮುಖಿಯರ ವಿಚಾರಣೆ ನಡೆಸಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸರಿಂದ 10 ಕ್ಕೂ ಹೆಚ್ಚು ಮಂಗಳಮುಖಿಯರ ವಿಚಾರಣೆ ನಡೆಸಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us