AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagara Drought Effect: ಬರದಿಂದ ಮೇವು ಸಿಗದೇ ಸಂತೆಯಲ್ಲಿ ಕಡಿಮೆ ಮೊತ್ತಕ್ಕೆ ದನಗಳ ಮಾರಾಟ

Chamarajanagara Drought Effect: ಬರದಿಂದ ಮೇವು ಸಿಗದೇ ಸಂತೆಯಲ್ಲಿ ಕಡಿಮೆ ಮೊತ್ತಕ್ಕೆ ದನಗಳ ಮಾರಾಟ

ಸೂರಜ್ ಪ್ರಸಾದ್ ಎಸ್.ಎನ್
| Edited By: ಸಾಧು ಶ್ರೀನಾಥ್​|

Updated on: Oct 05, 2023 | 7:18 PM

Share

ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಜಾನುವಾರುಗಳ ಸಂತೆಯಿತ್ತು. ಇಲ್ಲಿ ದನಕರಗಳಿಗೆ ಮೇವು ನೀಡಲು ಸಾದ್ಯವಾಗದ ರೈತರು ಸಿಕ್ಕ ಬೆಲೆಗೆ ಗೋವುಗಳನ್ನ ಮಾರಾಟ ಮಾಡುತ್ತಿದ್ದಾರೆ. ಇನ್ನು ಸಿಕ್ಕ ಅವಕಾಶವನ್ನ ಸದುಪಯೋಗಪಡಿಸಿ ಕೊಳ್ಳುತ್ತಿರುವ ಕಸಾಯಿಖಾನೆ ಮಾಲೀಕರು ಕಡಿಮೆ ಮೊತ್ತಕ್ಕೆ ರಾಸುಗಳನ್ನ ಕೊಂಡು ತಮಿಳುನಾಡು ಹಾಗೂ ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಬರದ ಛಾಯೆ ಗಡಿ ನಾಡು ಚಾಮರಾಜನಗರದ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರಿದೆ ಅನ್ನೊದಕ್ಕೆ ಇಂದು ಗುರುವಾರ ನಡೆದ ಜಾನುವಾರು ಸಂತೆಯೆ ಸಾಕ್ಷಿಯಾಗಿದೆ. ಗೋವುಗಳಿಗೆ ಮೇವು ಒದಗಿಸಲಾಗದೆ ಕಡಿಮೆ ಹಣಕ್ಕೆ ಜಾನುವಾರುಗಳನ್ನ ರೈತ ಮಾರಾಟ ಮಾಡುತ್ತಿದ್ದಾನೆ ಈ ಕುರಿತಾದ ಒಂದು ರಿಪೋರ್ಟ್ ನಿಮ್ಮ ಮುಂದೆ.

ರೈತನ ಬದುಕು ಮಳೆ ಜೊತೆ ಆಡುವ ಜೂಜಾಟವಿದ್ದಂತೆ. ಮಳೆ ಬಂದ್ರೆ ಬೆಳೆ ಬೆಳೆಯಲು ಸಾದ್ಯ ಮಳೆ ಕೈ ಕೊಟ್ರೆ ಬೆಳೆ ಬೆಳೆಯಲು ಸಾದ್ಯವಿಲ್ಲದಂತಹ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲಿ ಮಾಡ್ಕೊಂಡ ಸಾಲ ತೀರಿಸಲಾಗದೆ. ರೈತರು ಸಾಲದ ಶೂಲಕ್ಕೆ ಬಲಿಯಾಗ್ತಯಿದ್ದಾರೆ. ಈ ಬಾರಿ ಗಡಿ ನಾಡು ಚಾಮರಾಜನಗರದಲ್ಲಿ ನಿರ್ಧಿಷ್ಠ ಪ್ರಮಾಣದಲ್ಲಿ ಮಳೆಯಾಗಿಲ್ಲ. ಕೆರೆ ಕಟ್ಟೆಗಳು ನೀರಿಲ್ಲದೆ ಬತ್ತಿ ಹೋಗಿವೆ. ಇತ್ತ ಜಾನುವಾರುಗಳಿಗೆ ಕನಿಷ್ಠ ಮೇವು ಒದಗಿಸಲು ಸಾದ್ಯವಾಗದೆ ಅನ್ನದಾತರು ಪರದಾಡುತ್ತಿದ್ದಾನೆ.

ಇನ್ನು ಇಂದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಜಾನುವಾರುಗಳ ಸಂತೆಯಿತ್ತು. ಇಲ್ಲಿ ದನಕರಗಳಿಗೆ ಮೇವು ನೀಡಲು ಸಾದ್ಯವಾಗದ ರೈತರು ಸಿಕ್ಕ ಬೆಲೆಗೆ ಗೋವುಗಳನ್ನ ಮಾರಾಟ ಮಾಡುತ್ತಿದ್ದಾರೆ. ಇನ್ನು ಸಿಕ್ಕ ಅವಕಾಶವನ್ನ ಸದುಪಯೋಗಪಡಿಸಿ ಕೊಳ್ಳುತ್ತಿರುವ ಕಸಾಯಿಖಾನೆ ಮಾಲೀಕರು ಕಡಿಮೆ ಮೊತ್ತಕ್ಕೆ ರಾಸುಗಳನ್ನ ಕೊಂಡು ತಮಿಳುನಾಡು ಹಾಗೂ ಕೇರಳಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಅದೇನೆ ಹೇಳಿ ಮಳೆಯಿಲ್ಲದೆ ಬೆಳೆದ ಬೆಳೆ ಕೈ ಕೊಟ್ಟಿದೆ. ಇತ್ತ ಜಾನುವಾರುಗಳಿಗೆ ಮೇವಿಲ್ಲ, ಬೆಳೆಗಾಗಿ ಸಹಕಾರಿ ಬ್ಯಾಂಕ್ ಗಳಲ್ಲಿ ಮಾಡ್ಕೊಂಡ ಸಾಲ ಮತ್ತೊಂದೆಡೆ. ಇಂತ ಪರಿಸ್ಥಿತಿಯಲ್ಲಿ ಸಿಲುಕಿದ ಅನ್ನದಾತನ ಬದುಕು ಮೂರಾ ಬಟ್ಟೆಯಾಗಿದೆ. ಆದಷ್ಟು ಬೇಗ ರಾಜ್ಯ ಸರ್ಕಾರ ಬರ ಪರಿಹಾರ ಘೋಷಣೆ ಮಾಡಿ ಜಾನುವಾರುಗಳಿಗೆ ಸೂಕ್ತ ಮೇವನ್ನ ಒದಗಿಸಲಿ ಎಂಬುದೆ ನಮ್ಮ ಆಶಯ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More