Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಂದೇಶ ಕಳಿಸುವವರಿಗೆ ದರ್ಶನ್ ಪ್ರಕರಣ ಎಚ್ಚರಿಕೆ ಘಂಟೆ: ಚಂದನ್ ಶೆಟ್ಟಿ

ಅಶ್ಲೀಲ ಸಂದೇಶ ಕಳಿಸುವವರಿಗೆ ದರ್ಶನ್ ಪ್ರಕರಣ ಎಚ್ಚರಿಕೆ ಘಂಟೆ: ಚಂದನ್ ಶೆಟ್ಟಿ

ಮಂಜುನಾಥ ಸಿ.
|

Updated on: Jul 17, 2024 | 9:41 PM

ಚಂದನ್ ಶೆಟ್ಟಿ ನಟಿಸಿರುವ ‘ವಿದ್ಯಾರ್ಥಿ-ವಿಧ್ಯಾರ್ಥಿನಿಯರೇ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ನಡುವೆ ಸೋಷಿಯಲ್ ಮೀಡಿಯಾದ ನೆಗೆಟಿವಿಟಿ ಬಗ್ಗೆ ಚಂದನ್ ಮಾತನಾಡಿದ್ದಾರೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರು ರೀಲ್ಸ್, ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಇಬ್ಬರ ವಿಚ್ಛೇದನದ ಬಳಿಕ ಇಬ್ಬರೂ ಸಹ ಸೋಷಿಯಲ್ ಮೀಡಿಯಾ ನೆಗೆಟಿವಿಟಿ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚಂದನ್ ಶೆಟ್ಟಿ ‘ವಿದ್ಯಾರ್ಥಿ-ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ನಟಿಸಿದ್ದು ಸಿನಿಮಾ ಕೆಲವೇ ದಿನದಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿಯೂ ಸಹ ಸಾಮಾಜಿಕ ಜಾಲತಾಣದ ಕೆಡುಕುಗಳ ಬಗ್ಗೆ ಸಂದೇಶ ನೀಡಲಾಗಿದೆ. ಸೋಷಿಯಲ್ ಮೀಡಿಯಾ ಟ್ರೋಲಿಂಗ್​ನಿಂದ ಖಾಸಗಿ ಜೀವನದಲ್ಲಿ ನೊಂದಿರುವ ಚಂದನ್ ಶೆಟ್ಟಿ, ಈಗಿನ ದರ್ಶನ್ ಪ್ರಕರಣವನ್ನು, ಅಶ್ಲೀಲ ಸಂದೇಶ ಕಳಿಸುವವರು ಎಚ್ಚರಿಕೆ ಘಂಟೆಯಾಗಿ ಪರಿಗಣಿಸಬೇಕು ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ