ಬಿಗ್ ಬಾಸ್ ಎಕ್ಸಿಟ್​ಗೆ ಕಾರಣ ಏನು? ಟಿವಿ9 ಸಂದರ್ಶನದಲ್ಲಿ ಚಂದ್ರಪ್ರಭ ಹೇಳಿದ್ದಿಷ್ಟು

Edited By:

Updated on: Nov 10, 2025 | 1:05 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಚಂದ್ರಪ್ರಭ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಎಲಿಮಿನೇಷ್ ಆಗಲು ಕಾರಣ ಏನು ಎಂಬುದು ಎಲ್ಲರಿಗೂ ತಿಳಿದಿಲ್ಲ. ಈ ಬಗ್ಗೆ ಅವರು ಟಿವಿ9 ಕನ್ನಡದ ಜೊತೆ ಮಾತನಾಡಿ ಒಂದಷ್ಟು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಚಂದ್ರಪ್ರಭ ಅವರು ಎಲಿಮಿನೇಟ್ ಆದರು. ಕಡಿಮೆ ವೋಟ್ ಪಡೆದು ಚಂದ್ರಪ್ರಭ ಅವರು ದೊಡ್ಮನೆಯಿಂದ ಹೊರ ಬಂದರು ಎಂದು ಹೇಳಲು ಸಾಧ್ಯವಿಲ್ಲ. ಅವರಿಗೆ ಬಿಗ್ ಬಾಸ್​ನಿಂದ ಹೊರ ಬರಬೇಕು ಎಂದು ಅನಿಸುತ್ತಾ ಇತ್ತಂತೆ. ವೀಕೆಂಡ್​ ಎಲಿಮಿನೇಷನ್​ನಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದು ಚಂದ್ರಪ್ರಭ ಹಾಗೂ ಸುಧಿ. ಸುಧಿ ವಿಶೇಷ ಅಧಿಕಾರ ಬಳಸಿ ಉಳಿದುಕೊಂಡರು. ಚಂದ್ರಪ್ರಭ ಬಯಸಿದಂತೆ ಎಲಿಮಿನೇಟ್ ಆದರು. ‘ಒಂದು ವಾರದಿಂದ ಹೊರ ಬರಬೇಕು ಎಂದು ಅನಿಸುತ್ತಲೇ ಇತ್ತು. ಇದಕ್ಕೆ ಕಾರಣ ಏನು ಎಂಬುದನ್ನು ಮುಂದಿನ ದಿನಗಳಲ್ಲಿ ಹೇಳ್ತೀನಿ ಎಂದರು’ ಚಂದ್ರಪ್ರಭ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More