ಸಿಎಂ ಆಗುತ್ತಿರುವ ಡಿ.ಕೆ ಶಿವಕುಮಾರ್ಗೆ ಒಳ್ಳೆಯದಾಗಲಿ ಎಂದು ದರ್ಗಾದಲ್ಲಿ ಪ್ರಾರ್ಥನೆ
ಚನ್ನಪಟ್ಟಣದ ಆಖೀಲ್ ಶಾ ಖಾದ್ರಿ ದರ್ಗಾದಲ್ಲಿ ಚನ್ನಪಟ್ಟಣ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕದಲ್ಲಿ ನಡೆಯಲಿರುವ ಸಚಿವ ಸಂಪುಟ ರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಈ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು. ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವ ಡಿಕೆ ಶಿವಕುಮಾರ್ಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು.
ಬೆಂಗಳೂರು, ಮೇ 30: ಚನ್ನಪಟ್ಟಣದ ಆಖೀಲ್ ಶಾ ಖಾದ್ರಿ ದರ್ಗಾದಲ್ಲಿ ಚನ್ನಪಟ್ಟಣ ನಗರಸಭೆ ಅಧ್ಯಕ್ಷರು, ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಸೇರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕರ್ನಾಟಕದಲ್ಲಿ ನಡೆಯಲಿರುವ ಸಚಿವ ಸಂಪುಟ ರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ಈ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.
ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುತ್ತಿರುವ ಡಿಕೆ ಶಿವಕುಮಾರ್ಗೆ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ದೊರಕಲಿ ಹಾಗೂ ಚನ್ನಪಟ್ಟಣ ಶಾಸಕರಾದ ಸಿ.ಪಿ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ಮುಖಂಡರು ಮತ್ತು ಸದಸ್ಯರು ಸಾಮೂಹಿಕವಾಗಿ ಬೇಡಿಕೊಂಡರು. ಕಾಂಗ್ರೆಸ್ ಪಕ್ಷದ ಸದಸ್ಯರು ಸಹ ಈ ಪ್ರಾರ್ಥನೆಯಲ್ಲಿ ಭಾಗವಹಿಸಿ, ತಮ್ಮ ಉದ್ದೇಶಗಳು ಯಶಸ್ವಿಯಾಗಲಿ ಎಂದು ಕೋರಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
