AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ

ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ

ಸುಷ್ಮಾ ಚಕ್ರೆ
|

Updated on: Jun 28, 2025 | 8:24 PM

Share

ಉತ್ತರಾಖಂಡದಲ್ಲಿ ಧಾರಾಕಾರ ಮಳೆಯಿಂದಾಗಿ ಚಾರ್ ಧಾಮ್ ಯಾತ್ರೆಗೆ ಅಡ್ಡಿ ಉಂಟಾಗಿದೆ. ಭೂಕುಸಿತಗಳು ಮತ್ತು ಬಂಡೆಗಳು ಬೀಳುವುದರಿಂದ ಕೇದಾರನಾಥ ಮತ್ತು ಬದರಿನಾಥದ ಪ್ರಮುಖ ಮಾರ್ಗಗಳು ಮುಚ್ಚಿಹೋಗಿವೆ. ಇದರಿಂದಾಗಿ ನೂರಾರು ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಭೂಕುಸಿತದಿಂದಾಗಿ ಕೇದಾರನಾಥ-ಸೋನ್‌ಪ್ರಯಾಗ ಯಾತ್ರೆ ಮಾರ್ಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಆದರೆ, ರಸ್ತೆ ತೆರವು ಕಾರ್ಯಾಚರಣೆಯ ನಂತರ ಮತ್ತೆ ತೆರೆಯಲಾಯಿತು. ಭಕ್ತರು ಮಾರ್ಗದಲ್ಲಿ ತಮ್ಮ ಪ್ರಯಾಣವನ್ನು ಪುನರಾರಂಭಿಸುತ್ತಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು. ಈಗಾಗಲೇ ಒಬ್ಬರ ಮೃತದೇಹ ಪತ್ತೆಯಾಗಿದೆ, 8 ಯಾತ್ರಿಕರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಧಿಕಾರಿಗಳು ರಸ್ತೆಗಳನ್ನು ತೆರವುಗೊಳಿಸಲು ಮತ್ತು ಕಾಣೆಯಾದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿದ್ದಾರೆ.

ನವದೆಹಲಿ, ಜೂನ್ 28: ಭಾರೀ ಮಳೆಯಿಂದಾಗಿ ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರೆಗೆ (Char Dham Yatra) ತೀವ್ರ ಅಡ್ಡಿಯಾಗಿದೆ. ಭೂಕುಸಿತ ಮತ್ತು ಮುಚ್ಚಿಹೋಗಿರುವ ರಸ್ತೆಗಳು ಕೇದಾರನಾಥ ಮತ್ತು ಬದರಿನಾಥಕ್ಕೆ ಪ್ರಯಾಣಿಸುತ್ತಿದ್ದ ನೂರಾರು ಯಾತ್ರಿಕರು ಸಿಲುಕಿಕೊಂಡಿದ್ದಾರೆ. ರಕ್ಷಣಾ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ನಡೆಯುತ್ತಿವೆ. ಸೋನ್‌ಪ್ರಯಾಗ್-ಮುಂಕಟಿಯಾ ಮಾರ್ಗವು ಅವಶೇಷಗಳ ಕಾರಣದಿಂದಾಗಿ ದುಸ್ತರವಾಗಿದೆ. ಹನುಮಾನ್ ದೇವಸ್ಥಾನ ಮತ್ತು ಮುಂಕಟಿಯಾದಲ್ಲಿನ ಶಟಲ್ ಸೇತುವೆಯ ಬಳಿ ರಸ್ತೆ ತಡೆಗಳಿವೆ. ಈಗಾಗಲೇ ಒಬ್ಬರ ಮೃತದೇಹ ಪತ್ತೆಯಾಗಿದೆ, 8 ಯಾತ್ರಿಕರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಧಿಕಾರಿಗಳು ರಸ್ತೆಗಳನ್ನು ತೆರವುಗೊಳಿಸಲು ಮತ್ತು ಕಾಣೆಯಾದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More