ಕುಮಾರಸ್ವಾಮಿ ಬಗ್ಗೆ ಜಮೀರ್ ಅಹ್ಮದ್ ಕಾಮೆಂಟ್​ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಲಿಲ್ಲ

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2024 | 2:55 PM

ಉಪ ಚುನಾವಣೆಗಳ ಫಲಿತಾಂಶದ ಬಗ್ಗೆ ಮಾತಾಡಿದ ಚಲುವರಾಯಸ್ವಾಮಿ, ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಕಾಳಗ ನಡೆದಿದೆ, ಆದರೂ ಕಾಂಗ್ರೆಸ್ ಅಭ್ಯರ್ಥಿ ಹತ್ತು ಸಾವಿರ ವೋಟುಗಳಿಂದ ಗೆಲ್ಲಬಹುದು, ಸಂಡೂರಲ್ಲಿ ಕಾಂಗ್ರೆಸ್ ಸುಲಭವಾಗಿ ಗೆಲ್ಲುತ್ತದೆ ಎಂದ ಅವರು ಶಿಗ್ಗಾವಿ ಫಲಿತಾಂಶದ ಬಗ್ಗೆ ಖಚಿತವಾಗಿ ಹೇಳಲಿಲ್ಲ.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ತಮ್ಮ ಸಹೋದ್ಯೋಗಿ ಜಮೀರ್ ಅಹ್ಮದ್ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಗ್ಗೆ ಮಾಡಿರುವ ಜನಾಂಗೀಯ ನಿಂದನೆಗೆ ಪ್ರತಿಕ್ರಿಯೆ ನೀಡಲಿಲ್ಲ. ತಾನು ಇಬ್ಬರ ರೀತಿಯಲ್ಲೂ ಮಾತಾಡಲ್ಲ, ಆ ವಿಷಯ ಬಿಟ್ಟು ಬೇರೇನಾದ್ರೂ ಕೇಳಿ ಅಂದರು. ಕುಮಾರಸ್ವಾಮಿ ನಿಮ್ಮನ್ನು ಚಲುವ ಅಂತ ಕರೀತಿದ್ರಾ ಅಂತ ಕೇಳಿದ ಪ್ರಶ್ನೆಗೆ ನಗುವೇ ಅವರ ಉತ್ತರವಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ತಮ್ಮ ಮೇಲೆ ಹಲ್ಲೆ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಸಚಿವ ಚಲುವರಾಯಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.