Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು

Updated on: Feb 05, 2026 | 11:20 AM

ಒಡಿಶಾದ ಜಾಜ್​ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದಿಗಳ ಪ್ರಕಾರ, ಭದ್ರಕ್‌ನಿಂದ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು  ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಬೋಗಿಗಳಿಗೂ ಅಷ್ಟಾಗಿ ಹಾನಿಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ರೈಲು ಮಾರ್ಗದ ಹಾನಿಗೊಳಗಾದ ಭಾಗದಲ್ಲಿ ಮರುಸ್ಥಾಪನೆ ಕಾರ್ಯ ಪ್ರಾರಂಭವಾಯಿತು.

ಜಾಜ್​ಪುರ, ಫೆಬ್ರವರಿ 05: ಒಡಿಶಾದ ಜಾಜ್​ಪುರ ಜಿಲ್ಲೆಯ ಜಖಾಪುರ ರೈಲು ನಿಲ್ದಾಣದ ಬಳಿ ಚೆನ್ನೈ ಸೆಂಟ್ರಲ್ ಎಕ್ಸ್​ಪ್ರೆಸ್ ರೈಲು ಹಳಿ ತಪ್ಪಿದೆ. ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ರೈಲು ಭುವನೇಶ್ವರದಿಂದ ಕೋಲ್ಕತ್ತಾಗೆ ತೆರಳುತ್ತಿತ್ತು. ಮಾಧ್ಯಮ ವರದಿಗಳ ಪ್ರಕಾರ, ಭದ್ರಕ್‌ನಿಂದ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿರುವ ಅಧಿಕಾರಿಗಳು  ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಮತ್ತು ಬೋಗಿಗಳಿಗೂ ಅಷ್ಟಾಗಿ ಹಾನಿಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಘಟನೆಯ ನಂತರ ರೈಲು ಮಾರ್ಗದ ಹಾನಿಗೊಳಗಾದ ಭಾಗದಲ್ಲಿ ಮರುಸ್ಥಾಪನೆ ಕಾರ್ಯ ಪ್ರಾರಂಭವಾಯಿತು.

ಏತನ್ಮಧ್ಯೆ, ಹಳಿಗಳನ್ನು ತೆರವುಗೊಳಿಸಲು ಮತ್ತು ಸಾಧ್ಯವಾದಷ್ಟು ಬೇಗ ರೈಲು ಸೇವೆಗಳನ್ನು ಪುನರಾರಂಭಿಸಲು ಎಂಜಿನಿಯರಿಂಗ್ ತಂಡಗಳನ್ನು ನಿಯೋಜಿಸಲಾಗಿದೆ. ರೈಲ್ವೆ ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.ಮಾರ್ಗದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕ್ರಮಗಳನ್ನು ಪ್ರಾರಂಭಿಸಿದರು . ಹಳಿ ತಪ್ಪಲು ನಿಖರವಾದ ಕಾರಣ ಇನ್ನೂ ದೃಢೀಕರಿಸಲಾಗಿಲ್ಲ ಮತ್ತು ಮರು ಸ್ಥಾಪನೆ ಪ್ರಯತ್ನಗಳು ಮುಗಿದು ಕಾರ್ಯಾಚರಣೆಗಳು ಸಾಮಾನ್ಯ ಸ್ಥಿತಿಗೆ ಮರಳಿದ ನಂತರ ವಿವರವಾದ ತನಿಖೆಯನ್ನು ಮಾಡಲಾಗುತ್ತದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us