ಎದೆನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಹೋಗುವುದನ್ನು ಮುಂದೂಡುವುದು ಸರಿಯಲ್ಲ: ಡಾ ಕೆಎಸ್ ರವೀಂದ್ರನಾಥ್

ಅರುಣ್​ ಕುಮಾರ್​ ಬೆಳ್ಳಿ

Updated on: Jun 30, 2025 | 3:27 PM

ಕಳೆದ ವರ್ಷಕ್ಕೆ ಹೋಲಿಸಿದರೆ, ಹೃದ್ರೋಗಗಳಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಶೇಕಡ 8ರಿಂದ 10ರಷ್ಟು ಹೆಚ್ಚಾಗಿದೆ, ಜಯದೇವ ಆಸ್ಪತ್ರೆ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಸೇರಿದಂತೆ ಕೆಸಿ ಆಸ್ಪತ್ರೆ ಹಾಗೂ ಈಎಸ್ಐ ಆಸ್ಪತ್ರೆಗಳಲ್ಲಿರುವ ಸ್ಯಾಟೆಲೈಟ್ ಕೆಂದ್ರಗಳಲ್ಲಿ ಸೇರಿ ಪ್ರತಿದಿನ ಏನಿಲ್ಲವೆಂದರೂ 3,000 ಹೊರರೋಗಿಗಳ ಹೃದಯ ಸಂಬಂಧೀ ಕಾಯಿಲೆ ತಪಾಸಣೆ ನಡೆಯುತ್ತಿದೆ ಎಂದು ಡಾ ರವೀಂದ್ರನಾಥ್ ಹೇಳುತ್ತಾರೆ.

ಬೆಂಗಳೂರು, ಜೂನ್ 30: ಹಾಸನ ಜಿಲ್ಲೆ ಪುನಃ ಸುದ್ದಿಯಲ್ಲಿದೆ, ನಿನ್ನೆ 4ಜನ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಒಂದು ತಿಂಗಳಿಗೂ ಕೊಂಚ ಹೆಚ್ಚಿನ ಅವಧಿಯಲ್ಲಿ ಒಟ್ಟು 21 ಜನ ಹಾರ್ಟ್ ಅಟ್ಯಾಕ್ ನಿಂದ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿರುವ ಡಾ ಕೆಎನ್ ರವೀಂದ್ರನಾಥ್ (Dr KN Ravindranath) ಅವರು ಹೇಳುವ ಪ್ರಕಾರ ಹಾಸನ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಸ್ಟೆಮಿ (ಎಸ್​ಟಿ ಸೆಗ್ಮೆಂಟ್ ಎಲಿವೇಶನ್ ಮಯೋಕಾರ್ಡಿಯಲ್ ಇಂಫಾಕ್ಷನ್) ಇಲ್ಲ, ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ ತಜ್ಞರಿದ್ದ್ದಾರೆ ಮತ್ತು ಆ್ಯಂಜಿಯೋಗ್ರಾಮ್ ಹಾಗೂ ಅ್ಯಂಜಿಯೋಪ್ಲಾಸ್ಟ್ರಿ ಮಾಡುವ ಸೌಲಭ್ಯಗಳಿವೆ. ಹಾಸನ ಜಿಲ್ಲೆಯಲ್ಲಿ ಹೃದಯಾಘಾ ಪ್ರಮಾಣ ಹೆಚ್ಚುತ್ತಿರುವುದರ ಹಿಂದೆ ಕೋವಿಡ್ ಲಸಿಕೆಯ ಪಾತ್ರವೇನಾದರೂ ಇದೆಯಾ ಅಂತ ತನಿಖೆ ಮಾಡಲು ತಮ್ಮ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ, ಶೀಘ್ರದಲ್ಲೇ ಒಂದು ವರದಿಯನ್ನು ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುವುದು ಎಂದು ಡಾ ರವೀಂದ್ರನಾಥ್ ಹೇಳಿದರು.

 

ಇದನ್ನೂ ಓದಿ:  ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಬ್ಬರು ಬಲಿ, ಕಳೆದೊಂದು ತಿಂಗಳಲ್ಲಿ ಹೃದಯಾಘಾತದಿಂದ 16ನೇ ದುರ್ಮರಣ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.