‘ಚೇತನ್ ನಿಜವಾಗಿಯೂ ಒಬ್ಬ ಅರೆಹುಚ್ಚ’: ಸಾರಾ ಗೋವಿಂದು ಖಡಕ್ ಪ್ರತಿಕ್ರಿಯೆ
ಡಾ. ರಾಜ್ಕುಮಾರ್ ಸಮಾಧಿ ಜಾಗಕ್ಕೆ ಸಂಬಂಧಿಸಿದಂತೆ ಚೇತನ್ ಅಹಿಂಸಾ ನೀಡಿದ ಹೇಳಿಕೆಯು ವಿವಾದಕ್ಕೆ ಕಾರಣ ಆಗಿದೆ. ಸಮಾಧಿಗೆ ಎರಡೂವರೆ ಎಕರೆ ಜಾಗ ನೀಡಿದ್ದು ಸರಿಯಲ್ಲ ಎಂದು ಹಲವರು ವಿರೋಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ನಟ ಚೇತನ್ ಅಹಿಂಸಾ ಅವರು ಡಾ. ರಾಜ್ಕುಮಾರ್ ಸಮಾಧಿ (Dr Rajkumar Samadhi) ಜಾಗಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣ ಆಗಿದೆ. ಸಮಾಧಿಗೆ ಎರಡೂವರೆ ಎಕರೆ ಜಾಗ ನೀಡಿದ್ದು ಸರಿಯಲ್ಲ ಎಂದು ಅನೇಕರು ವಿರೋಧಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ‘ಚೇತನ್ ಕ್ಷಮೆ ಕೇಳಿದ ಬಳಿಕ ಮತ್ತೆ ಮಾತು ಬದಲಿಸಿದ್ದಾನೆ. ನಿಜವಾಗಿಯೂ ಅವನು ಒಬ್ಬ ಅರೆಹುಚ್ಚ. ಅವನಿಗೆ ಯೋಚನಾ ಶಕ್ತಿ ಇಲ್ಲ. ಅಂಥವರನ್ನು ನಮ್ಮ ಜೊತೆ ಇಟ್ಟುಕೊಂಡರೆ ನಮಗೂ ಕೆಟ್ಟ ಹೆಸರು ಬರುತ್ತದೆ. ಅವನು ಯಾವುದೇ ಸಿನಿಮಾದಲ್ಲಿ ನಟಿಸಿದರೂ ಅದನ್ನು ಬಹಿಷ್ಕರಿಸಬೇಕು ಅಂತ ಜನರು ತೀರ್ಮಾನ ಮಾಡಿದ್ದಾರೆ’ ಎಂದು ಸಾರಾ ಗೋವಿಂದು (Sa Ra Govind) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು

