Video: ಮತಗಳಿಗಾಗಿ ಛಾತಿ ಮೈಯಾಗೆ ಅವಮಾನ ಮಾಡುತ್ತಿದೆ ಕಾಂಗ್ರೆಸ್​ , ಬಿಹಾರದ ಜನತೆ ಸಹಿಸೋದಿಲ್ಲ: ಮೋದಿ

Updated on: Oct 30, 2025 | 1:04 PM

ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್​​ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು.

ಮುಜಾಫರ್ಪುರ, ಅಕ್ಟೋಬರ್ 30: ಮತಗಳಿಗಾಗಿ ಛಾತಿ ಮೈಯ್ಯಾಗೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ವಿರುದ್ಧ ಕಿಡಿಕಾರಿದ್ದಾರೆ. ಮಹಿಳೆಯರು ಒಂದು ಗುಟುಕು ನೀರು ಕುಡಿಯದೆ, ದೀರ್ಘ ಉಪವಾಸ ಆಚರಿಸಿ ಗಂಗಾನದಿಯಲ್ಲಿ ಸೂರ್ಯದೇವನಿಗೆ ಅರ್ಘ್ಯ ಅರ್ಪಿಸುತ್ತಾರೆ. ಇದು ಕಾಂಗ್ರೆಸ್​​ಗೆ ನಾಟಕದಂತೆ ಕಾಣುತ್ತಾ ಎಂದು ಮೋದಿ ಪ್ರಶ್ನಿಸಿದ್ದಾರೆ. ಬಿಹಾರದ ತಾಯಂದಿರು, ಸಹೋದರಿಯರು ಛಾತಿ ಮೈಯಾಗೆ ಆದ ಅವಮಾನವನ್ನು ಸಹಿಸಿಕೊಳ್ಳುತ್ತಾರಾ ಖಂಡಿತವಾಗಿಯೂ ಇಲ್ಲ ಎಂದರು.

ರಾಹುಲ್ ಗಾಂಧಿ ಇದೇ ಪ್ರದೇಶದಲ್ಲಿ ನಿನ್ನೆ ಪ್ರಚಾರ ನಡೆಸಿ ಪ್ರಧಾನಿ ಮೋದಿಯವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದರು. ರಾಹುಲ್ ಗಾಂಧಿ ಇಂದು ಬಿಹಾರದಲ್ಲಿ ಚುನಾವಣಾ ಪ್ರಚಾರವನ್ನು ಮಾಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿಕೊಂಡು ಕೆಲವು ಹೇಳಿಕೆಗಳನ್ನು ನೀಡಿದ್ದರು. ಪ್ರಧಾನಿ ಮೋದಿಯವರಿಗೆ ನಿಮ್ಮ ಮತ ಮಾತ್ರ ಬೇಕು. ನೀವೇನಾದರೂ ಮತಗಳಿಗಾಗಿ ಬದಲಾಗಿ ಡ್ಯಾನ್ಸ್ ಮಾಡಲು ಹೇಳಿದರೆ ಮೋದಿ ವೇದಿಕೆಯಲ್ಲಿ ನೃತ್ಯ ಕೂಡ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More