AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ

ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ

ರಮೇಶ್ ಬಿ. ಜವಳಗೇರಾ
|

Updated on:Sep 19, 2026 | 3:10 PM

Share

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಈ ಹಿಂದೆ ಸಿಎಂ ವಿಜಯ್ ಜೋಸೆಫ್​ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವಾಗಿ ಘೋಷಣೆ ಮಾಡಿದ್ದರು. ಅದರಂತೆ ಈಗ ಪ್ರಯೋಗಿಕವಾಗಿ ಶುರುವಾದಂತಿದೆ. ಹೌದು.. ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗುತ್ತಿದ್ದು, ಸಿಎಂ ಆಶಯದಂತೆ ಈ ಹೊಸ ಯೋಜನೆಗೆ ಸಿದ್ಧತೆಗಳು ನಡೆದಿವೆ.

ಬೆಂಗಳೂರು, (ಸೆಪ್ಟೆಂಬರ್ 19): ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಈ ಹಿಂದೆ ಸಿಎಂ ವಿಜಯ್ ಜೋಸೆಫ್​ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವಾಗಿ ಘೋಷಣೆ ಮಾಡಿದ್ದರು. ಅದರಂತೆ ಈಗ ಪ್ರಯೋಗಿಕವಾಗಿ ಶುರುವಾದಂತಿದೆ. ಹೌದು.. ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗುತ್ತಿದ್ದು, ಸಿಎಂ ಆಶಯದಂತೆ ಈ ಹೊಸ ಯೋಜನೆಗೆ ಸಿದ್ಧತೆಗಳು ನಡೆದಿವೆ.

ಈ ಬಗ್ಗೆ ತಮಿಳುನಾಡು ಶಿಕ್ಷಣ ಸಚಿವ ರಾಜ್ ಮೋಹನ್ ಪ್ರತಿಕ್ರಿಯಿಸಿದ್ದು, ಜೈಲಿನಲ್ಲಿರುವ ಕೈದಿಗಳಿಗೂ ಚಿಕನ್ ಬಿರಿಯಾನಿ ಸಿಗುತ್ತದೆ. ಹಾಗಾದರೆ ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದುವ ಮುಗ್ಧ ವಿದ್ಯಾರ್ಥಿಗಳಿಗೆ ಆ ಭಾಗ್ಯ ಸಿಗಬಾರದೇ? ನಾವು ತರಲು ಮುಂದಾಗುತ್ತಿರುವ ಈ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಬೆಳೆಯುವ ಮಕ್ಕಳಿಗೆ ಸಾಕಷ್ಟು ಪ್ರಮಾಣದ ಪ್ರೋಟೀನ್ ಮತ್ತು ಪೌಷ್ಟಿಕಾಂಶದ ಅವಶ್ಯಕತೆ ಇರುತ್ತದೆ. ತಮಿಳುನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಪೌಷ್ಟಿಕಾಂಶದ ಕ್ರಾಂತಿಯೂ ಕೈಜೋಡಿಸಿ ಸಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಚಿಕನ್ ಬಿರಿಯಾನಿ ತಿನ್ನದವರಿಗೆ ವೆಜ್ ತಿನ್ನಬಹುದು ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 19, 2026 03:09 PM

Follow Us