ವರಮಹಾಲಕ್ಷ್ಮಿ ಪ್ರಯುಕ್ತ ಮನೆ ಮನೆಗೆ ತೆರಳಿ ಬಾಗಿನ ನೀಡಿದ ಶಾಸಕ ಪ್ರದೀಪ್ ಈಶ್ವರ್

Edited By:

Updated on: Jul 30, 2023 | 11:55 AM

ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ.

ಚಿಕ್ಕಬಳ್ಳಾಪುರ, (ಜುಲೈ 30): ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರದೀಶ್ ಈಶ್ವರ್​ ಭಾರೀ ಸುದ್ದಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಮನೆ-ಮನೆ ಹೋಗಿ ಸಮಸ್ಯೆ ಆಲಿಸುವುದು, ಗ್ರಾಮಗಳ ಸಮಸ್ಯೆಗಳನ್ನು ಕೇಳುವುದು ಸೇರಿದಂತೆ ವಿವಿಧ ಜನಪರ ಕಾರ್ಯಮಗಳೊಂದಿಗೆ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಇದೀಗ ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ. ಕಲರ್​ಪುಲ್ ರೇಷ್ಮೆ ಸೀರೆ, ಅರಿಷಿಣ-ಕುಂಕುಮ, ಬಳೆ ಬಾಗಿನ ನೀಡಿ ಹಿರಿಯರ ಆಶೀರ್ವಾದ ಪಡೆಯುತ್ತಿದ್ದಾರೆ.

Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More