ವರಮಹಾಲಕ್ಷ್ಮಿ ಪ್ರಯುಕ್ತ ಮನೆ ಮನೆಗೆ ತೆರಳಿ ಬಾಗಿನ ನೀಡಿದ ಶಾಸಕ ಪ್ರದೀಪ್ ಈಶ್ವರ್

| Updated By: ರಮೇಶ್ ಬಿ. ಜವಳಗೇರಾ

Updated on: Jul 30, 2023 | 11:55 AM

ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ.

ಚಿಕ್ಕಬಳ್ಳಾಪುರ, (ಜುಲೈ 30): ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರದೀಶ್ ಈಶ್ವರ್​ ಭಾರೀ ಸುದ್ದಿಯಾಗುತ್ತಿದ್ದಾರೆ. ಕ್ಷೇತ್ರದಲ್ಲಿ ಮನೆ-ಮನೆ ಹೋಗಿ ಸಮಸ್ಯೆ ಆಲಿಸುವುದು, ಗ್ರಾಮಗಳ ಸಮಸ್ಯೆಗಳನ್ನು ಕೇಳುವುದು ಸೇರಿದಂತೆ ವಿವಿಧ ಜನಪರ ಕಾರ್ಯಮಗಳೊಂದಿಗೆ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಇದೀಗ ಚಿಕ್ಕಬಳ್ಲಾಫುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಕ್ಷೇತ್ರದಾದ್ಯಂತ ಮಹಿಳೆಯರಿಗೆ ಬಾಗಿನ ನೀಡುತ್ತಿದ್ದಾರೆ. ಕಲರ್​ಪುಲ್ ರೇಷ್ಮೆ ಸೀರೆ, ಅರಿಷಿಣ-ಕುಂಕುಮ, ಬಳೆ ಬಾಗಿನ ನೀಡಿ ಹಿರಿಯರ ಆಶೀರ್ವಾದ ಪಡೆಯುತ್ತಿದ್ದಾರೆ.

Follow us on