AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 29, 2026 | 2:47 PM

Share

ಚಿಕ್ಕಬಳ್ಳಾಪುರದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಜಿಲ್ಲಾಡಳಿತ ಭವನದ ಎದುರು ನಡೆದ ಈ ಪ್ರತಿಭಟನೆ ವೇಳೆ ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ನಡೆದಿದೆ. ರೈತರ ಮೇಲೆ ಪೊಲೀಸರು ಹಲ್ಲೆ ಮತ್ತು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಚಿವರ ಕಾರಿಗೆ ಮುತ್ತಿಗೆ ಹಾಕುವ ಯತ್ನವೂ ಈ ವೇಳೆ ರೈತರಿಂದ ನಡೆದಿದೆ.

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರಿ ಹೈಡ್ರಾಮಾವೇ ನಡೆದಿದೆ. ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕಾರಣಕ್ಕೆ ಕೆಲ ಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ ಬಣ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ ನಡೆಸಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us