AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯನಿರತ ಕೆಎಸ್​​ಆರ್​ಟಿಸಿ ಬಸ್​​ ಕಂಡಕ್ಟರ್​​ ಮೇಲೆ ಹಲ್ಲೆ

ವಿದ್ಯಾರ್ಥಿನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯನಿರತ ಕೆಎಸ್​​ಆರ್​ಟಿಸಿ ಬಸ್​​ ಕಂಡಕ್ಟರ್​​ ಮೇಲೆ ಹಲ್ಲೆ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Oct 15, 2025 | 7:46 PM

Share

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ-ಗೌರಿಬಿದನೂರು ಮಾರ್ಗದ KSRTC ಕಂಡಕ್ಟರ್ ಡಿ.ಎಂ. ಹರೀಶ್ ಮೇಲೆ ಹಲ್ಲೆ ನಡೆದಿದೆ. ವಿದ್ಯಾರ್ಥಿನಿಯ ಆಧಾರ್ ಕಾರ್ಡ್ ಸಮಸ್ಯೆ ಕುರಿತು ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಪೋಷಕರು ಚಲಿಸುವ ಬಸ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸೆರೆಯಾಗಿದೆ. ವಿಡಿಯೋ ನೋಡಿ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 15: ಕರ್ತವ್ಯನಿರತ ಕೆಎಸ್​​ಆರ್​ಟಿಸಿ ಕಂಡಕ್ಟರ್​​ಗೆ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ಜಿಲ್ಲೆಯ ಗುಡಿಬಂಡೆ ಗೌರಿಬಿದನೂರು ಮಾರ್ಗದ ಬಸ್​​ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಆಧಾರ್ ಕಾರ್ಡ್ ಫೋಟೋ ಮೇಲೆ ಇಂಕ್ ಬಿದ್ದಿತ್ತು. ಫೋಟೋ ಸ್ಪಷ್ಟವಾಗಿ ಕಾಣದ ಹಿನ್ನೆಲೆ ಮತ್ತೆ ಬರುವಾಗ ಬೇರೆ ಕಾರ್ಡ್ ತರುವಂತೆ ವಿದ್ಯಾರ್ಥಿನಿ ಆಧಾರ್ ಕಾರ್ಡ್ ಪ್ರಯಾಣಿಕರಿಗೆ ತೋರಿಸಿ ಕಂಡಕ್ಟರ್ ಬುದ್ಧಿವಾದ ಹೇಳಿದ್ದ. ಬಸ್​ನಲ್ಲಿ ನಡೆದ ಘಟನೆ ಬಗ್ಗೆ ಪೋಷಕರಿಗೆ ವಿದ್ಯಾರ್ಥಿನಿಗೆ ಮಾಹಿತಿ ನೀಡಿದ್ದು, ಹಲ್ಲೆ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Oct 15, 2025 07:40 PM
Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More