ವಿದ್ಯಾರ್ಥಿನಿಗೆ ಬುದ್ಧಿವಾದ ಹೇಳಿದ್ದಕ್ಕೆ ಕರ್ತವ್ಯನಿರತ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ-ಗೌರಿಬಿದನೂರು ಮಾರ್ಗದ KSRTC ಕಂಡಕ್ಟರ್ ಡಿ.ಎಂ. ಹರೀಶ್ ಮೇಲೆ ಹಲ್ಲೆ ನಡೆದಿದೆ. ವಿದ್ಯಾರ್ಥಿನಿಯ ಆಧಾರ್ ಕಾರ್ಡ್ ಸಮಸ್ಯೆ ಕುರಿತು ಬುದ್ಧಿವಾದ ಹೇಳಿದ್ದಕ್ಕೆ ಆಕೆಯ ಪೋಷಕರು ಚಲಿಸುವ ಬಸ್ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸೆರೆಯಾಗಿದೆ. ವಿಡಿಯೋ ನೋಡಿ.
ಚಿಕ್ಕಬಳ್ಳಾಪುರ, ಅಕ್ಟೋಬರ್ 15: ಕರ್ತವ್ಯನಿರತ ಕೆಎಸ್ಆರ್ಟಿಸಿ ಕಂಡಕ್ಟರ್ಗೆ ಹಿಗ್ಗಾಮುಗ್ಗಾ ಥಳಿಸಿರುವಂತಹ ಘಟನೆ ಜಿಲ್ಲೆಯ ಗುಡಿಬಂಡೆ ಗೌರಿಬಿದನೂರು ಮಾರ್ಗದ ಬಸ್ನಲ್ಲಿ ನಡೆದಿದೆ. ವಿದ್ಯಾರ್ಥಿನಿ ಆಧಾರ್ ಕಾರ್ಡ್ ಫೋಟೋ ಮೇಲೆ ಇಂಕ್ ಬಿದ್ದಿತ್ತು. ಫೋಟೋ ಸ್ಪಷ್ಟವಾಗಿ ಕಾಣದ ಹಿನ್ನೆಲೆ ಮತ್ತೆ ಬರುವಾಗ ಬೇರೆ ಕಾರ್ಡ್ ತರುವಂತೆ ವಿದ್ಯಾರ್ಥಿನಿ ಆಧಾರ್ ಕಾರ್ಡ್ ಪ್ರಯಾಣಿಕರಿಗೆ ತೋರಿಸಿ ಕಂಡಕ್ಟರ್ ಬುದ್ಧಿವಾದ ಹೇಳಿದ್ದ. ಬಸ್ನಲ್ಲಿ ನಡೆದ ಘಟನೆ ಬಗ್ಗೆ ಪೋಷಕರಿಗೆ ವಿದ್ಯಾರ್ಥಿನಿಗೆ ಮಾಹಿತಿ ನೀಡಿದ್ದು, ಹಲ್ಲೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 15, 2025 07:40 PM
Loading...
Unable to load recommendations.
Follow Us