ಈಶಾ ಫೌಂಡೇಶನ್ ಆದಿಶಿವ ಪ್ರತಿಮೆ ನೋಡಲು ಆಗಮಿಸಿದ ಜನ, ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಲ್ಲಿ ಜನಜಾತ್ರೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 04, 2024 | 10:25 AM

ಹಬ್ಬದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳು ಬಂದ ಕಾರಣ ಬೆಂಗಳೂರುಗೆ ಹೋಗುವವರ ಸಂಖ್ಯೆ ನಿಲ್ದಾಣದಲ್ಲಿ ಹೆಚ್ಚಿದೆಯಂತೆ. ಶಾಲಾ ಕಾಲೇಜುಗಳಿಗೆ ಹೋಗುವವರು ಮತ್ತು ಕಚೇರಿಗಳಿಗೆ ಹೋಗುವವರು ಬಸ್ ಹತ್ತಲು ಧಾವಂತ ಪ್ರದರ್ಶಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪ್ರಯಾಣಿಕರಲ್ಲಿ ಮಹಿಳೆಯರ ಸಂಖ್ಯೆಯೇ ಹೆಚ್ಚು!

ಚಿಕ್ಕಬಳ್ಳಾಪುರ: ಇದ್ಯಾವುದೇ ಜಾತ್ರೆ ಅಲ್ಲ, ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಬರಲು ಬಸ್​ ನಿಲ್ದಾಣದಲ್ಲಿ ಜನರ ನೂಕುನುಗ್ಗಾಟ. ದೀಪಾವಳಿ ಪ್ರಯುಕ್ತ ನಗರದಲ್ಲಿ ಈಶಾ ಪ್ರತಿಷ್ಠಾನದಿಂದ ನಿರ್ಮಿಸಲಾಗಿರುವ ಆದಿಶಿವನ ಪ್ರತಿಮೆ ದರ್ಶನ್ ಮಾಡಿಕೊಳ್ಳಲು ಸಾವಿರಾರು ಜನ ಆಗಮಿಸಿದ್ದರು. ಜನಜಂಗುಳಿಯ ನಿಮಿತ್ತ ಬೆಂಗಳುರುಗೆ ಹೆಚ್ಚುವರಿ ಬಸ್​​ಗಳ ಏರ್ಪಾಟನ್ನು ಕೆಎಸ್​ಆರ್​​ಟಿಸಿ ಮಾಡಿದ್ದರೂ ಈ ಪಾಟಿ ಜನ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಳೆಗೆ ಕೆಂಪು ಸುಂದರಿ ಟೊಮೇಟೊ ಬೆಲೆ ಭಾರಿ ಕುಸಿತ, ರೈತರು ಕಂಗಾಲು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.