AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ದೇಶಕ್ಕೆ ಒಳ್ಳೆದು ಮಾಡ್ತಾನೆ, ಅವನು ಬಂದ್ರೆ ಒಳ್ಳೆದಾಗುತ್ತೆ ಎನ್ನುತ್ತಾ 102ರ ಹಣ್ಣುಹಣ್ಣು ಮುದುಕಿ ಅಜ್ಜಿಯಿಂದ ಟೆಂಪಲ್ ರನ್

Temple run for Narendra Modi: ದೇವರ ಬಳಿ ನನಗಾಗಿ ಏನನ್ನು ಕೇಳಿಕೊಂಡಿಲ್ಲ, ದೇಶ, ಮೋದಿಗಾಗಿ ಬೇಡಿದ್ದೇನೆ ಎಂದು ಮೋದಿಗಾಗಿ ಮಗನ ಜೊತೆ ದೇವಾಲಯಗಳನ್ನ ಸುತ್ತುತ್ತಿರೋ ಶಿವಮ್ಮ ಹೇಳಿದ್ದಾರೆ. ಮಲೆಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿದ್ದ ಶಿವಮ್ಮ ಇದೀಗ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿರುವ ರಂಭಾಪುರಿ ಮಠಕ್ಕೆ ಆಗಮಿಸಿದ್ದಾರೆ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 25, 2024 | 1:04 PM

Share

ಚಿಕ್ಕಮಗಳೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ ಶಿವಮ್ಮ ಎಂಬ 102 ವರ್ಷದ ಹಣ್ಣುಹಣ್ಣು ಮುದುಕಿ ಪ್ರಧಾನಿ ಮೋದಿಗಾಗಿ ಟೆಂಪಲ್ ರನ್ ಮಾಡುತ್ತಿದ್ದಾರೆ. ಜೈ ಶ್ರೀರಾಮ್… ದೇಶಕ್ಕೆ ಒಳ್ಳೆದಾಗಬೇಕು, ಮಳೆ-ಬೆಳೆ ಚೆನ್ನಾಗಿ ಆಗಬೇಕು. ಮೋದಿ ಮತ್ತೆ ಪ್ರಧಾನ ಮಂತ್ರಿ ಆಗಬೇಕು. ಮೋದಿ ದೇಶಕ್ಕೆ ಒಳ್ಳೆದು ಮಾಡ್ತಾನೆ, ಅವನು ಬಂದ್ರೆ ಒಳ್ಳೆದಾಗುತ್ತೆ ಎನ್ನುತ್ತಾ ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರು ರಂಭಾಪುರಿ ಮಠಕ್ಕೆ ಭೇಟಿ ನೀಡಿದ್ದಾರೆ. ರಂಭಾಪುರಿ ಶ್ರೀಗಳ ದರ್ಶನ ಮಾಡಿ ಆಶೀರ್ವಾದ ಪಡೆದ ಶತಾಯುಷಿ ಶಿವಮ್ಮ ಮಳೆ-ಬೆಳೆ ಇಲ್ಲ, ದೇಶದ ಜನ ಸಮಸ್ಯೆಯಲ್ಲಿದ್ದಾರೆ. ಕಾಡು ಪ್ರಾಣಿಗಳು ಕುಡಿಯೋಕೆ ನೀರಿಲ್ಲದೆ ಪರದಾಡುತ್ತಿವೆ. ದೇಶಕ್ಕೆ ಮೋದಿ ಪ್ರಧಾನಿಯಾದರೆ ಮಳೆ-ಬೆಳೆ ಆಗಿ ದೇಶ ಸುಭಿಕ್ಷವಾಗಿರುತ್ತೆ. ನನ್ನ ಸ್ವಾರ್ಥಕ್ಕಾಗಿ ಏನೂ ಇಲ್ಲ… ಸ್ವಾರ್ಥಕ್ಕೆ ಹೇಳ್ತಿಲ್ಲ ಎಂದು ಶತಾಯುಷಿ ಶಿವಮ್ಮ ಹೇಳಿದ್ದಾರೆ.

ದೇವರ ಬಳಿ ನನಗಾಗಿ ಏನನ್ನು ಕೇಳಿಕೊಂಡಿಲ್ಲ, ದೇಶ, ಮೋದಿಗಾಗಿ ಬೇಡಿದ್ದೇನೆ ಎಂದು ಮೋದಿಗಾಗಿ ಮಗನ ಜೊತೆ ದೇವಾಲಯಗಳನ್ನ ಸುತ್ತುತ್ತಿರೋ ಶಿವಮ್ಮ ಹೇಳಿದ್ದಾರೆ. ಮಲೆಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿದ್ದ ಶಿವಮ್ಮ ಇದೀಗ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿರುವ ರಂಭಾಪುರಿ ಮಠಕ್ಕೆ ಆಗಮಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ