AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ

Video: ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Dec 29, 2025 | 11:54 AM

Share

ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್‌ನಲ್ಲಿ ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದು, ಅನಿಲ್ ಕುಮಾರ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿ ಲಿಖಿತ್‌ನನ್ನು ಬಂಧಿಸಿದ್ದು, ಗಾಯಗೊಂಡ ಅನಿಲ್ ಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಮಗಳೂರು, ಡಿ.29: ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್​ನಲ್ಲಿ ಸಿಗರೇಟ್ ವಿಚಾರವಾಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್​ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ಯುವಕ ಲಿಖಿತ್​​ನ್ನು ಪೊಲೀಸರು ವಶ ಪಡೆದಿದ್ದಾರೆ. ಬಾರ್​​ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 29, 2025 11:50 AM
Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More