ಚಿಕ್ಕಮಗಳೂರು: ಭೀಕರ ಅಪಘಾತ, ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಸ್ಕೂಟಿ ಸವಾರ, ವಿಡಿಯೋ ನೋಡಿ

ಕಾರೊಂದು ಡಿಕ್ಕಿಯಾಗಿ ಸ್ಕೂಟಿ ತೀವ್ರವಾಗಿ ಜಖಂಗೊಂಡ ಘಟನೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿ ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಸ್ಕೂಟಿ ಸವಾರ ಕೂದಲೆಳೆ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಇಲ್ಲಿದೆ.

ಚಿಕ್ಕಮಗಳೂರು: ಭೀಕರ ಅಪಘಾತ, ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದ ಸ್ಕೂಟಿ ಸವಾರ, ವಿಡಿಯೋ ನೋಡಿ
| Updated By: ಗಣಪತಿ ಶರ್ಮ

Updated on: Dec 13, 2023 | 12:36 PM

ಚಿಕ್ಕಮಗಳೂರು, ಡಿಸೆಂಬರ್ 13: ವ್ಯಕ್ತಿಯೊಬ್ಬರು ಹೋಂಡಾ ಆ್ಯಕ್ಟಿವಾದಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿ ಸ್ಕೂಟಿ ತೀವ್ರವಾಗಿ ಜಖಂಗೊಂಡ ಘಟನೆ ಚಿಕ್ಕಮಗಳೂರಿನ (Chikkamagaluru) ಬೇಲೂರು ರಸ್ತೆಯಲ್ಲಿ (Belur Road) ಮಂಗಳವಾರ ನಡೆದಿದೆ. ಅದೃಷ್ಟವಶಾತ್ ಸ್ಕೂಟಿ ಸವಾರ ಕೂದಲೆಳೆ ಅಂತರದಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಘಟನೆಯ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕಾರೊಂದು ಎಡಭಾಗದಲ್ಲಿ ನಿಧಾನವಾಗಿ ಹೋಗುತ್ತಿರುತ್ತದೆ. ಬಲಭಾಗದ ರೋಡ್ ಡಿವೈಡರ್‌ ಬಳಿ ಹೋಂಡಾ ಆಕ್ಟೀವಾದಲ್ಲಿ ವ್ಯಕ್ತಿ ತನ್ನ ಪಾಡಿಗೆ ಹೋಗುತ್ತಿದ್ದರು. ಇದರ ಹಿಂದೆ ವೇಗವಾಗಿ ಬಂದ ಕಾರೊಂದು, ಕಾರಿಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಸ್ವಲ್ಪ ಬಲಭಾಗಕ್ಕೆ ವಾಲಿದೆ. ಅಷ್ಟೇ ಅಲ್ಲದೆ, ಬಲಭಾಗದಲ್ಲಿ ಹೋಗ್ತಿದ್ದ ಸ್ಕೂಟಿಗೆ ರಭಸದಿಂದ ಗುದ್ದಿ ಮುಂದೆ ಹೋಗಿದೆ. ಆ್ಯಕ್ಟೀವಾ ಪುಡಿಪುಡಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಮನುಷ್ಯನ ಮುಖ‌ ಹೊಲುವ ವಿಚಿತ್ರ ಕುರಿಮರಿ ಜನನ

ಸಣ್ಣಪುಟ್ಟ ಗಾಯಗೊಂಡ ಸ್ಕೂಟಿ ಸವಾರನಿಗೆ ತಕ್ಷಣವೇ ಸ್ಥಳದಲ್ಲಿದ್ದವರು ಆರೈಕೆ ಮಾಡಿದ್ದಾರೆ. ಇಷ್ಟೆಲ್ಲಾ ಆದರೂ ಕಾರು ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್