Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ

ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on: Apr 15, 2025 | 9:30 PM

ಚಿಕ್ಕಮಗಳೂರಿನ ಶೆಟ್ಟಿಕೊಪ್ಪ ಗ್ರಾಮದ ಜೇಮ್ಸ್ ಮತ್ತು ಜೆಸ್ಸಿ ದಂಪತಿಗಳು ಗೃಹಲಕ್ಷಮಿ ಯೋಜನೆಯ 13 ತಿಂಗಳ ಹಣವನ್ನು ಬಳಸಿ ತಮ್ಮ ತೋಟದಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ. 3 ಇಂಚು ನೀರು ಚಿಮ್ಮಿದೆ. ಕಳೆದ ವರ್ಷದ ಎರಡು ವಿಫಲ ಪ್ರಯತ್ನಗಳ ನಂತರ ಈ ಯಶಸ್ಸು ಸಾಧ್ಯವಾಗಿದೆ. ಈ ದಂಪತಿಗಳು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದು, ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಅವರನ್ನು ಸನ್ಮಾನಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶೆಟ್ಟಿಕೊಪ್ಪ ಗ್ರಾಮದ ದಂಪತಿ ತಮ್ಮ ತೋಟದಲ್ಲಿ ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್​ ಕೊರೆಸಿದ್ದು, ಮೂರು ಇಂಚು ನೀರು ಚಿಮ್ಮಿದೆ. ಜೇಮ್ಸ್ ಮತ್ತು ಜೆಸ್ಸಿ ದಂಪತಿ 13 ತಿಂಗಳ ಹಣ 52 ಸಾವಿರ ರೂ. ಗೃಹ ಲಕ್ಷ್ಮೀ ಹಣದಲ್ಲಿ ಬೋರ್​ವೆಲ್​ ಕೊರೆಸಿದ್ದಾರೆ. ಕಳೆದ ವರ್ಷ ಎರಡು ಬೋರ್ ತೆಗೆಸಿದ್ದರು. ಆದರೆ, ಫೇಲ್ ಆಗಿದ್ದವು. ಅಮ್ಮ ಮತ್ತು ಪತ್ನಿ ಇಬ್ಬರ 13 ತಿಂಗಳ ಹಣ ಹಣ ಒಂದುಗೂಡಿಸಿ ಜೇಮ್ಸ್ ಬೋರ್ ತೆಗೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಂಪತಿ ಅಭಿನಂದನೆ ಸಲ್ಲಿಸಿದ್ದಾರೆ. ಎಬ್​ಆರ್ ಪುರ ತಾಲೂಕು ಕಚೇರಿಯಲ್ಲಿ ದಂಪತಿಗೆ ಅಧಿಕಾರಿಗಳು ಸನ್ಮಾನ ಮಾಡಿದ್ದಾರೆ.