ಸಾಂಬಾರ್ ಮಾಡಿಲ್ಲವೆಂದು ಬೈದ ತಂದೆ: ಅಷ್ಟಕ್ಕೇ ಸಾವಿನ ಕದ ತಟ್ಟಿದ ಮಗಳು
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವಬೃಂದದಲ್ಲಿ ತಂದೆಯ ಬೈಗುಳಕ್ಕೆ ನೊಂದು 22 ವರ್ಷದ ಸೌಜನ್ಯ ಪೂಜಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಂಬಾರ್ ಮಾಡಿಲ್ಲವೆಂದು ತಂದೆ ನಟೇಶ್ ಬೈದಿದ್ದರಿಂದ ಮನನೊಂದ ಯುವತಿ ನೇಣಿಗೆ ಶರಣಾಗಿದ್ದಾಳೆ. ಊಟದ ವಿಚಾರವಾಗಿ ನಡೆದ ಈ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ಚಿಕ್ಕಮಗಳೂರು, ಏಪ್ರಿಲ್ 26: ಸಾಂಬಾರ್ ಮಾಡಿಲ್ಲವೆಂದು ತಂದೆ ಬೈದಿದ್ದಕ್ಕೆ ಪುತ್ರಿ ನೇಣಿಗೆ ಶರಣಾಗಿರುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ(22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸೌಜನ್ಯ ತಂದೆ ನಟೇಶ್, ತರಕಾರಿ ತಂದು ಸಾಂಬಾರ್ ಮಾಡಲು ಹೇಳಿದ್ದಾರೆ. ಮಧ್ಯಾಹ್ನ ಊಟಕ್ಕೆ ಬಂದಾಗ ಸಾಂಬಾರ್ ಮಾಡಿಲ್ಲವೆಂದು ಬೈದಿದ್ದಾರೆ. ಅತ್ತ ನಟೇಶ್ ಪಕ್ಕದ ಮನೆಗೆ ಸಾಂಬಾರ್ ತರಲು ತೆರಳಿದ್ದಾಗ ಇತ್ತ ಸೌಜನ್ಯ ನೇಣಿಗೆ ಶರಣಾಗಿದ್ದಾಳೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
