ದಾಳಿಗೆ ಮುಂದಾದ ಕಾಡಾನೆ: ಪ್ರವಾಸಿಗರು ಜಸ್ಟ್ ಮಿಸ್!
ಚಿಕ್ಕಮಗಳೂರು ಜಿಲ್ಲೆಯ ಲಕ್ಕವಳ್ಳಿ ಸಮೀಪದ ಭದ್ರಾ ಅಭಯಾರಣ್ಯದಲ್ಲಿ ಪ್ರವಾಸಿಗರ ಜೀಪ್ ಮೇಲೆ ಕಾಡಾನೆ ದಾಳಿಗೆ ಮುಂದಾದ ಘಟನೆ ನಡೆದಿದೆ. ಪ್ರವಾಸಿಗರು ಜೀಪ್ನಲ್ಲಿ ಸಫಾರಿ ಹೊರಟಿದ್ದ ವೇಳೆ ಒಂಟಿ ಸಲಗದ ಬೆನ್ನಟ್ಟಿದೆ. ಜೀಪ್ ಚಾಲಕನ ಸಮಯಪ್ರಜ್ಞೆಯಿಂದ ಪ್ರವಾಸಿಗರ ಜೀವ ಉಳಿದಿದೆ. ವಿಡಿಯೋ ನೋಡಿ.
ಚಿಕ್ಕಮಗಳೂರು, ನವೆಂಬರ್ 28: ಜಿಲ್ಲೆಯ ತರೀಕೆರೆ ತಾಲೂಕಿನ ಲಕ್ಕವಳ್ಳಿ ಸಮೀಪದ ಭದ್ರಾ ಬಲದಂಡೆ ನಾಲೆ ಬಳಿ ಪ್ರವಾಸಿಗರ ಜೀಪ್ ಮೇಲೆ ಕಾಡಾನೆ ದಾಳಿಗೆ ಮುಂದಾದ ಘಟನೆ ನಡೆದಿದೆ. ಜಂಗಲ್ ಲಾಡ್ಜ್ನವರಿಗೆ ಸೇರಿದ ಜೀಪ್ನಲ್ಲಿ ಪ್ರವಾಸಿಗರು ಸಫಾರಿ ಹೊರಟಿದ್ದರು. ಈ ವೇಳೆ ಭದ್ರಾ ಬಲದಂಡೆ ನಾಲೆ ಬಳಿಯ ರಂಗನಾಥ ಸ್ವಾಮಿ ದೇವಸ್ಥಾನದ ಬಳಿ ಏಕಾಏಕಿ ಕಾಡಾನೆ ಜೀಪ್ ಅಟ್ಟಿಸಿಕೊಂಡು ಬಂದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಕಾಡಾನೆ ದಾಳಿಯಿಂದ ಪ್ರವಾಸಿಗರು ಜಸ್ಟ್ ಮಿಸ್ ಆಗಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 28, 2025 06:49 PM
Follow Us
Latest Videos
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ

