AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಬಿರುಗಾಳಿ ಸಹಿತ ವರುಣಾರ್ಭಟಕ್ಕೆ ನಲುಗಿದ ಮಲೆನಾಡು!

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 29, 2026 | 10:01 AM

Share

ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳೂರು ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಏಪ್ರಿಲ್ 4ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಚಿಕ್ಕಮಗಳೂರು, ಮಾರ್ಚ್​ 29: ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆಯ ಆರ್ಭಟ ಮುಂದುವರಿದಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌ಆರ್‌ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿನ್ನೆ ಮಧ್ಯಾಹ್ನದಿಂದಲೇ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿತ್ತು. ಚಿಕ್ಕಮಗಳೂರು ನಗರದಲ್ಲೂ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವಿಶೇಷವಾಗಿ ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಮಳೆಯಿಂದ ಪರದಾಡಿದ ದೃಶ್ಯಗಳು ಕಂಡುಬಂದಿವೆ. ಬಿರುಗಾಳಿ ಮಳೆಯಿಂದ ಜನರು ಆತಂಕಕ್ಕೀಡಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ ಏಪ್ರಿಲ್ 4ರವರೆಗೆ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us