ಚಿಕ್ಕಮಗಳೂರು, ಸೆಪ್ಟೆಂಬರ್ 26: ಮಳೆಯಿಂದಾಗಿ ರಸ್ತೆ ಸಂಪರ್ಕ ಕಡಿದುಕೊಂಡ ಪರಿಣಾಮ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ಅನಾರೋಗ್ಯಪಿಡಿತೆ ವೃದ್ಧೆಯನ್ನು ಆಸ್ಪತ್ರೆಗೆ ಸಾಗಿಸಲು ಕುಟುಂಬಸ್ಥರು ಪರದಾಡುವಂತಾಯಿತು. ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡೇ ಸಾಗಿಸಿದ ಗ್ರಾಮಸ್ಥರು ಕಳಸ ತಾಲೂಕು ಆಸ್ಪತ್ರೆಗೆ ವೃದ್ಧೆ ದಾಖಲಿಸಿದ್ದಾರೆ. ತೂಗು ಸೇತುವೆ ಮೇಲೆ ವೃದ್ಧೆಯನ್ನು ಗ್ರಾಮಸ್ಥರು ಸಾಗಿಸುವ ವಿಡಿಯೋ ‘ಟಿವಿ9’ಗೆ ಲಭ್ಯವಾಗಿದೆ.
ಈ ಭಾಗದಲ್ಲಿ ಸಮರ್ಪಕ ಸೇತುವೆ ನಿರ್ಮಿಸಿಕೊಡುವಂತೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ, ಗ್ರಾಮಸ್ಥರ ಮನವಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ