ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ, 5 ಲಕ್ಷ ಹಣ ಭಸ್ಮ

Edited By:

Updated on: Apr 22, 2024 | 8:04 AM

ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಏಪ್ರಿಲ್ 22: ಚಿಕ್ಕಮಗಳೂರು (Chikkamgaluru) ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ (Karnataka Bank) ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ (ATM) ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published on: Apr 22, 2024 08:03 AM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More