ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ATM ನಲ್ಲಿ ಅಗ್ನಿ ಅವಘಡ, 5 ಲಕ್ಷ ಹಣ ಭಸ್ಮ

| Updated By: ವಿವೇಕ ಬಿರಾದಾರ

Updated on: Apr 22, 2024 | 8:04 AM

ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ.

ಚಿಕ್ಕಮಗಳೂರು, ಏಪ್ರಿಲ್ 22: ಚಿಕ್ಕಮಗಳೂರು (Chikkamgaluru) ನಗರದ IG ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ನಾಟಕ ಬ್ಯಾಂಕ್​ನ (Karnataka Bank) ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ (ATM) ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ವಿಚಾರವನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್​ ಅಗ್ನಿಶಾಮಕ ದಳಕ್ಕೆ ತಿಳಿಸಿದೆ. ಮಾಹಿತಿ ಬಂದ ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:03 am, Mon, 22 April 24

Follow us on