ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: ವಿಡಿಯೋ ನೋಡಿ
ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದ ಮದುವೆ ರಿಸೆಪ್ಷನ್ನಲ್ಲಿ ಮಂಗಳಮುಖಿಯರು ಹಣಕ್ಕಾಗಿ ರಂಪಾಟ ಮಾಡಿದ್ದಾರೆ. ವಧು-ವರರ ಮುಂದೆ ಅಸಭ್ಯವಾಗಿ ವರ್ತಿಸಿ, ಸಂಬಂಧಿಕರಿಗೆ ಬೆದರಿಕೆ ಹಾಕಿದ್ದಾರೆ. ಕೇಳಿದಷ್ಟು ಹಣ ನೀಡದಿದ್ದರೆ ಕಿರಿಕ್ ಮಾಡುವುದಾಗಿ ಗಲಾಟೆ ಮಾಡಿದ್ದಾರೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸಂಬಂಧಿಕರು ಮಧ್ಯಪ್ರವೇಶಿಸಿ ಮಂಗಳಮುಖಿಯರಿಗೆ ಬುದ್ಧಿವಾದ ಹೇಳಿದ್ದಾರೆ.
ಚಿಕ್ಕಮಗಳೂರು, ಫೆಬ್ರವರಿ 11: ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವಂತಹ ಘಟನೆ ನಗರದ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಸಂಬಂಧಿಕರು ಮಂಗಳಮುಖಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

