ಚಿಕ್ಕಮಗಳೂರು: ದೇವಿರಮ್ಮ ದರ್ಶನಕ್ಕೆ ಬಂದಿದ್ದ ಭಕ್ತೆ ಅಸ್ವಸ್ಥ, 10 ಜನರ ರಕ್ಷಣೆ

Edited By: ವಿವೇಕ ಬಿರಾದಾರ

Updated on: Oct 31, 2024 | 12:29 PM

ಚಿಕ್ಕಮಗಳೂರು ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ‌ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ.

ಚಿಕ್ಕಮಗಳೂರು, ಅಕ್ಟೋಬರ್​ 31: ಚಿಕ್ಕಮಗಳೂರು (Chikkamagaluru) ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ (Deviramma) ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ‌ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಮೂಲದ ಜಯಮ್ಮ‌ (55) ಅಸ್ವಸ್ಥಗೊಂಡ ಮಹಿಳೆ. ಪೊಲೀಸರು ಹಗ್ಗದ ಮೂಲಕ ಮಹಿಳೆಯನ್ನು ರಕ್ಷಣೆ ಮಾಡಿದರು. ಈವರೆಗೆ ಅಸ್ವಸ್ಥಗೊಂಡಿದ್ದ 10ಕ್ಕೂ ಅಧಿಕ ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್​ಗೆ​ ಟ್ರಾಫಿಕ್​ ಜಾಮ್​ ಬಿಸಿ ತಟ್ಟಿದೆ. ಭಕ್ತರು ಸಿಕ್ಕ ಸಿಕ್ಕ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್​ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ಇದರಿಂದ ಆ್ಯಂಬುಲೆನ್ಸ್​​ ಹೋಗಲು ದಾರಿ ಇಲ್ಲದಂತಾಯಿತು. ಕೊನೆಗೆ ಪೊಲೀಸರು ಪಾರ್ಕಿಂಗ್​ ಮಾಡಿದ್ದ ಕಾರು, ಬೈಕ್​​ಗಳನ್ನು ತೆರವು ಗೊಳಿಸಿ, ಆಂಬುಲೆನ್ಸ್​ ಹೋಗಲು ದಾರಿ ಮಾಡಿಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 31, 2024 12:28 PM
Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More