ಚಿಕ್ಕಮಗಳೂರು: ವಕೀಲನ ಮೇಲೆ ಗಂಭೀರ ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ಎಸ್ ಪಿ ಆದೇಶ

ಅರುಣ್​ ಕುಮಾರ್​ ಬೆಳ್ಳಿ

Updated on: Dec 01, 2023 | 10:32 AM

ಪೊಲೀಸ್ ಮತ್ತು ವಕೀಲರ ನಡುವೆ ತಿಕ್ಕಾಟ ಹೊಸದೇನಲ್ಲ. ಕಾನೂನು ಗೊತ್ತಿರುವವರು ಮತ್ತು ಅದರ ಪರಿಪಾಲಕರ ನಡುವೆ ಪ್ರಾಯಶಃ ಹಿರಿಮೆ ಮತ್ತು ಪ್ರತಿಷ್ಠೆಗಾಗಿ ಜಗಳಗಳು ನಡೆಯುತ್ತಿರಬಹು. ಆದರೆ, ಪೊಲೀಸರು ಯಾರ ಮೇಲೆಯೂ ದೈಹಿಕ ನಡೆಸುವಂತಿಲ್ಲ. ಚಿಕ್ಕಮಗಳೂರಿನ ಟೌನ್ ಪೊಲೀಸರು ಹದ್ದುಮೀರಿ ವರ್ತಿಸಿರೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.

ಚಿಕ್ಕಮಗಳೂರು: ಗುರುವಾರ ಸಾಯಂಕಾಲ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ವಕೀಲ ಪ್ರೀತಮ್ (Advocate Preetham) ಅನ್ನುವವರ ಮೇಲೆ ಗಂಭೀರ ಸ್ವರೂಪದ ಹಲ್ಲೆ ನಡೆಸಿರುವ ಒಬ್ಬ ಪೊಲೀಸ್ ಇನ್ಸ್ ಪೆಕ್ಟರ್ (PSI), ಒಬ್ಬ ಎಎಸ್ ಐ, ಒಬ್ಬ ಹೆಡ್ ಕಾನ್ ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳನ್ನು ವಿರುದ್ಧ ಐಪಿಸಿ 307, 324, 504 ಮತ್ತು 506 ಸೆಕ್ಷನ್ ಗಳ ಅಡಿ ಎಫ್ ಐ ಆರ್ ದಾಖಲಿಸಿಕೊಂಡು ಸಸ್ಪೆಂಡ್ ಮಾಡಲಾಗಿದೆ ಮತ್ತು ಅವರ ವಿರುದ್ಧ ಇಲಾಖಾ ತನಿಖೆ ನಡೆಸುವ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರ ಆಮ್ಟೆ (Vikram Amte, SP) ಹೇಳಿದರು. ಘಟನೆಯ ಬಗ್ಗೆ ಮಾಧ್ಯಮಗಳಿಗೆ ವಿವರಣೆ ನೀಡಿದ ಆಮ್ಟೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೀತಮ್ ಅವರನ್ನು ಭೇಟಿಯಾಗಿ ಚಿಕ್ಕಮಗಳೂರಿನ ಡಿವೈ ಎಸ್ ಪಿ ಹೇಳಿಕೆ ಪಡೆದುಕೊಂಡ ಬಳಿಕ ಕ್ರಮ ಜರುಗಿಸಲಾಗಿದೆ, ತಮ್ಮ ದೂರಿನಲ್ಲಿ ವಕೀಲರು ಇಬ್ಬರ ಹೆಸರು ಮಾತ್ರ ಹೇಳಿದ್ದು ಇನ್ನಿತರರಿಂದ ಹಲ್ಲೆಯಾಗಿದೆ ಅಂತ ಹೇಳಿದ್ದಾರೆ ಎಂದರು. ಬಾರ್ ಕೌನ್ಸಿಲ್ ಸದಸ್ಯರೊಂದಿಗೆ ಮಾತುಕತೆ ನಡೆದಿದ್ದು ಅವರು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ ಎಂದು ಎಸ್ ಪಿ ಆಮ್ಟೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.