ಮೂರು ತಿಂಗಳಲ್ಲಿ ನಮಗೆ ಸಂಕಷ್ಟ ತಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇದೆಯಾ? ಸಿಎಂ ವಿರುದ್ಧ ರೈತನ ಆಕ್ರೋಶ

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದ ರೈತ ಸುಧಾಕರ್ ಪೂಜಾರಿ ಅವರು ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮೂರು ತಿಂಗಳಲ್ಲಿ ನಮಗೆ ಸಂಕಷ್ಟ ತಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇದೆಯಾ? ರೈತರಿಗೆ ಒಂದು ತಿಂಗಳು ಸರ್ಕಾರ ಬಿಟ್ಟು ಕೊಡಿ ಹೇಗೆ ನಡೆಸಬೇಕು ನಾವು ತೋರಿಸುತ್ತೇವೆ ಎಂದಿದ್ದಾರೆ.

ಮೂರು ತಿಂಗಳಲ್ಲಿ ನಮಗೆ ಸಂಕಷ್ಟ ತಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇದೆಯಾ? ಸಿಎಂ ವಿರುದ್ಧ ರೈತನ ಆಕ್ರೋಶ
| Updated By: ಆಯೇಷಾ ಬಾನು

Updated on:Oct 15, 2023 | 9:13 AM

ಚಿಕ್ಕೋಡಿ, ಅ.15: ರಾಜ್ಯದೆಲ್ಲೆಡೆ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಅದರಲ್ಲೂ ಇಡೀ ಬೆಳಗಾವಿ ಜಿಲ್ಲೆ ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಂತೂ ಹಿಂದೆಂದೂ ಕೇಳರಿಯದ ಬರಗಾಲವಿದ್ದು ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಈ ಮಧ್ಯೆ ಲೋಡ್ ಶೆಡ್ಡಿಂಗ್ ಸಮಸ್ಯೆ ರೈತರನ್ನು ಇನ್ನಷ್ಟು ನರಕಕ್ಕೆ ದೂಕಿದೆ. ಹೀಗಾಗಿ ರೈತರ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆಗೆ ರೈತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಕೃಷ್ಣಾ ನದಿಯಲ್ಲಿ ನಿಂತು ಸಿಎಂ, ಡಿಸಿಎಂ, ಇಂಧನ ಸಚಿವರಿಗೆ ರೈತ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದ ರೈತ ಸುಧಾಕರ್ ಪೂಜಾರಿ ಅವರು ಸಚಿವರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಕೃಷ್ಣಾ ನದಿಯಲ್ಲಿ ನೀರಿದೆ ಆದ್ರೆ ಬಳಸಲು ಆಗುತ್ತಿಲ್ಲ. ಹಲ್ಲಿದ್ರೆ ಕಡಲೆ ಇಲ್ಲ, ಕಡಲೆ ಇದ್ರೆ ಹಲ್ಲಿಲ್ಲದಂತಹ ಪರಿಸ್ಥಿತಿ ಇದೆ. ಮೂರು ತಿಂಗಳಲ್ಲಿ ನಮಗೆ ಸಂಕಷ್ಟ ತಂದಿದ್ದೀರಿ, ನಿಮಗೆ ಮಾನ ಮರ್ಯಾದೆ ಇದೆಯಾ? ರೈತರಿಗೆ ಒಂದು ತಿಂಗಳು ಸರ್ಕಾರ ಬಿಟ್ಟು ಕೊಡಿ ಹೇಗೆ ನಡೆಸಬೇಕು ನಾವು ತೋರಿಸುತ್ತೇವೆ. ನಾಟಕ ಮಾಡೋದು ಬಿಟ್ಟು ಕೈ ಮುಗೀತಿನಿ ನಮಗೆ 7 ಗಂಟೆ ವಿದ್ಯುತ್ ನೀಡಿ. ನಿಮ್ಮ ಮನೆಗೆ ಬಂದು ನಾವು ಗ್ಯಾರಂಟಿ ಯೋಜನೆ ಕೊಡಿ ಎಂದು ಕೇಳಿಲ್ಲ. ಸಿದ್ದರಾಮಯ್ಯ, ಡಿಕೆಶಿಗೆ ಊಟದ ವೇಳೆ ತರಕಾರಿ ಇಲ್ಲಂದ್ರೆ ನಡೆಯುತ್ತಾ? ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಅಕ್ಕಾ ಎಲ್ಲಿದಿ ಯವ್ವಾ ಎಂದು ರೈತ ಆಕ್ರೋಶ ಹೊರ ಹಾಕಿದ್ದಾರೆ. ನಿಮಗೆ ಕೈ ಮುಗಿದು ಕೇಳ್ತೀನಿ ವಿದ್ಯುತ್ ನೀಡಿ ಎಂದು ರೈತ ಮನವಿ ಮಾಡಿದ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:12 am, Sun, 15 October 23

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ