ಗೇಟ್ ಬಿದ್ದು ಮಗು ಸಾವು ಕೇಸ್: ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್ ಗುಂಡೂರಾವ್
ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಅವರು, ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 22: ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವು ಕೇಸ್ಗೆ ಸಂಬಂಧಿಸಿದಂತೆ ಕೆ.ಸಿ.ಜನರಲ್ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಭೇಟಿ ನೀಡಿ ಬಾಲಕನ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಈ ಬಗ್ಗೆ ತನಿಖೆ ಮಾಡುತ್ತೇವೆ. ಗೇಟ್ ಹಾಳಾದ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ. ಇದುವರೆಗೂ ಈ ಬಗ್ಗೆ ನಮ್ಮ ಗಮನಕ್ಕಂತೂ ಬಂದಿಲ್ಲ. 4 ವರ್ಷದ ಹಿಂದೆ ಮೈದಾನಕ್ಕೆ ಗೇಟ್ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ನಮ್ಮ ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.
ವರದಿ: ಪ್ರದೀಪ್ ಕ್ರೈಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

