ಚಿತ್ರದುರ್ಗ: ಹತ್ತು ತಿಂಗಳಿಂದ ಕಟ್ಟದ ಬಾಡಿಗೆ, ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಸಿಬ್ಬಂದಿಗೆ ರಸ್ತೆಯಲ್ಲಿ ನಿಲ್ಲುವ ಸ್ಥಿತಿ!

ಇದು ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿ ಮತ್ತು ಉಡಾಫೆ ಮನೋಭಾವದ ಪರಮಾವಧಿ ಅಂದರೆ ತಪ್ಪಲ್ಲ. ಇಲಾಖೆಯ ಚಿತ್ರದುರ್ಗ ಅಧಿಕಾರಿಗಳನ್ನು ಸಚಿವೆ ಹೆಬ್ಬಾಳ್ಕರ್ ಕೂಡಲೇ ಪ್ರಶ್ನಿಸಿ ಮಕ್ಕಳ ಮತ್ತು ಸಿಬ್ಬಂದಿಯ ತೊಂದರೆ ನಿವಾರಿಸಬೇಕು.

|

Updated on: Sep 08, 2023 | 10:41 AM

ಚಿತ್ರದುರ್ಗ: ಇದೊಂದು ಅಸಹನೀಯ ದೃಶ್ಯ, ಯಾರೋ ಮಾಡಿದ ತಪ್ಪಿಗೆ ಚಿಕ್ಕ ಚಿಕ್ಕ ಮಕ್ಕಳು ತೊಂದರೆ ಅನುಭವಿಸುವ ಸ್ಥಿತಿ. ಜಿಲ್ಲೆಯ ಹೊಸದುರ್ಗ ಪಟ್ಟಣದ (Hosadurga Town) 17ನೇ ವಾರ್ಡ್ ನಲ್ಲಿನ ಬಾಡಿಗೆ ಕಟ್ಟಡವೊಂದರಲ್ಲಿ ಅಂಗನವಾಡಿ ಕೇಂದ್ರವನ್ನು (Anganwadi centre) ನಡೆಸಲಾಗುತ್ತದೆ. ಸಮಸ್ಯೆ ಎದುರಾಗಿರೋದು ಕಟ್ಟಡದ ಬಾಡಿಗೆ ಕಟ್ಟದ (rental payment) ವಿಷಯದಲ್ಲಿ. ಲಭ್ಯವಿರುವ ಮಾಹಿತಿಯ ಪ್ರಕಾರ ಕಳೆದ 10 ತಿಂಗಳಿಂದ ಕಟ್ಟಡದ ಬಾಡಿಗೆ ಪಾವತಿಸಿಲ್ಲ. ತಾಳ್ಮೆ ಕಳೆದುಕೊಂಡ ಸಾದಿಕ್ ಹೆಸರಿನ ಮಾಲೀಕ ಇಂದು ಬೆಳಗ್ಗೆ ಅದಕ್ಕೆ ಬೀಗ ಜಡಿದಿದ್ದಾರೆ. ಎಂದಿನಂತೆ ಬೆಳಗ್ಗೆ ಅಂಗನವಾಡಿ ಕೇಂದ್ರಕ್ಕೆ ಬಂದ ಸಿಬ್ಬಂದಿ ಮತ್ತು ಮಕ್ಕಳು ಕೇಂದ್ರದ ಹೊರಗಡೆ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿ ಮತ್ತು ಉಡಾಫೆ ಮನೋಭಾವದ ಪರಮಾವಧಿ ಅಂದರೆ ತಪ್ಪಲ್ಲ. ಇಲಾಖೆಯ ಚಿತ್ರದುರ್ಗ ಅಧಿಕಾರಿಗಳನ್ನು ಸಚಿವೆ ಹೆಬ್ಬಾಳ್ಕರ್ ಕೂಡಲೇ ಪ್ರಶ್ನಿಸಿ ಮಕ್ಕಳ ಮತ್ತು ಸಿಬ್ಬಂದಿಯ ತೊಂದರೆ ನಿವಾರಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್