‘ಚಿನ್ನಾರಿಮುತ್ತ’ನಿಗೆ 31 ವರ್ಷ, ನೆನಪಿನ ಬುತ್ತಿ ತೆರೆದಿಟ್ಟ ವಿಜಯ್ ರಾಘವೇಂದ್ರ
ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿರುವ ‘ಚಿನ್ನಾರಿ ಮುತ್ತ’ ಬಿಡುಗಡೆ ಆಗಿ 31 ವರ್ಷಗಳಾಗಿವೆ. ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದ ವಿಜಯ್ ರಾಘವೇಂದ್ರ, ಆ ಸಿನಿಮಾದ ಕೆಲ ಸವಿನೆನಪುಗಳನ್ನು ಹಂಚಿಕೊಂಡಿದ್ದಾರೆ.
ವಿಜಯ್ ರಾಘವೇಂದ್ರ ಬಾಲನಟನಾಗಿ ನಟಿಸಿ, ಟಿಎಸ್ ನಾಗಾಭರಣ ನಿರ್ದೇಶನ ಮಾಡಿದ್ದ ‘ಚಿನ್ನಾರಿಮುತ್ತ’ ಸಿನಿಮಾ ಬಿಡುಗಡೆ ಆಗಿ 31 ವರ್ಷಗಳಾಗಿವೆ. ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಅತ್ಯುತ್ತಮ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ‘ಚಿನ್ನಾರಿಮುತ್ತ’ ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು. ಆ ಸಿನಿಮಾದ ಚಿತ್ರೀಕರಣದ ಅನುಭವ, ಸಿನಿಮಾದಿಂದ ಧಕ್ಕಿದ ಜನಪ್ರಿಯತೆ, ಸಿನಿಮಾಕ್ಕೆ ಧಕ್ಕಿದ ಯಶಸ್ಸು ಇನ್ನಿತರೆ ವಿಷಯಗಳ ಬಗ್ಗೆ ನಟ ವಿಜಯ್ ರಾಘವೇಂದ್ರ ನೆನಪು ಮಾಡಿಕೊಂಡಿದ್ದಾರೆ. ಅಂದಹಾಗೆ ಈಗ ಟಿಎಸ್ ನಾಗಾಭರಣ ಪತ್ನಿ, ‘ಜೀನಿಯಸ್ ಮುತ್ತು’ ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಸಹ ಮಕ್ಕಳ ಸಿನಿಮಾನೆ ಆಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 29, 2024 10:52 PM
Latest Videos

ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
