‘ಚಿನ್ನಾರಿಮುತ್ತ’ನಿಗೆ 31 ವರ್ಷ, ನೆನಪಿನ ಬುತ್ತಿ ತೆರೆದಿಟ್ಟ ವಿಜಯ್ ರಾಘವೇಂದ್ರ

Updated on: Jul 30, 2024 | 7:40 AM

ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿರುವ ‘ಚಿನ್ನಾರಿ ಮುತ್ತ’ ಬಿಡುಗಡೆ ಆಗಿ 31 ವರ್ಷಗಳಾಗಿವೆ. ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದ ವಿಜಯ್ ರಾಘವೇಂದ್ರ, ಆ ಸಿನಿಮಾದ ಕೆಲ ಸವಿನೆನಪುಗಳನ್ನು ಹಂಚಿಕೊಂಡಿದ್ದಾರೆ.

ವಿಜಯ್ ರಾಘವೇಂದ್ರ ಬಾಲನಟನಾಗಿ ನಟಿಸಿ, ಟಿಎಸ್ ನಾಗಾಭರಣ ನಿರ್ದೇಶನ ಮಾಡಿದ್ದ ‘ಚಿನ್ನಾರಿಮುತ್ತ’ ಸಿನಿಮಾ ಬಿಡುಗಡೆ ಆಗಿ 31 ವರ್ಷಗಳಾಗಿವೆ. ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಅತ್ಯುತ್ತಮ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ‘ಚಿನ್ನಾರಿಮುತ್ತ’ ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು. ಆ ಸಿನಿಮಾದ ಚಿತ್ರೀಕರಣದ ಅನುಭವ, ಸಿನಿಮಾದಿಂದ ಧಕ್ಕಿದ ಜನಪ್ರಿಯತೆ, ಸಿನಿಮಾಕ್ಕೆ ಧಕ್ಕಿದ ಯಶಸ್ಸು ಇನ್ನಿತರೆ ವಿಷಯಗಳ ಬಗ್ಗೆ ನಟ ವಿಜಯ್ ರಾಘವೇಂದ್ರ ನೆನಪು ಮಾಡಿಕೊಂಡಿದ್ದಾರೆ. ಅಂದಹಾಗೆ ಈಗ ಟಿಎಸ್ ನಾಗಾಭರಣ ಪತ್ನಿ, ‘ಜೀನಿಯಸ್ ಮುತ್ತು’ ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಸಹ ಮಕ್ಕಳ ಸಿನಿಮಾನೆ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 29, 2024 10:52 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More