AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದ್ಮ ಅವಾರ್ಡ್ ಬಳಿಕ ಔತಣಕೂಟದಲ್ಲಿ ಭಾಗಿ ಆದ ಚಿರಂಜೀವಿ, ರಾಮ್ ಚರಣ್

ಪದ್ಮ ಅವಾರ್ಡ್ ಬಳಿಕ ಔತಣಕೂಟದಲ್ಲಿ ಭಾಗಿ ಆದ ಚಿರಂಜೀವಿ, ರಾಮ್ ಚರಣ್

ರಾಜೇಶ್ ದುಗ್ಗುಮನೆ
|

Updated on: May 10, 2024 | 9:42 AM

Share

ಮೇ 9ರಂದು ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡಿದ್ದಾರೆ. ಆ ಬಳಿಕ ಔತಣಕೂಟ ಏರ್ಪಡಿಸಲಾಗಿತ್ತು. ಚಿರಂಜೀವಿ ಜೊತೆಗೆ ಪತ್ನಿ ಸುರೇಖಾ, ಮಗ ರಾಮ್ ಚರಣ್, ಸೊಸೆ ಉಪಾಸನಾ ಕೊನಿಡೆಲಾ ಕೂಡ ಈ ಔತಣಕೂಟದಲ್ಲಿ ಭಾಗಿ ಆಗಿದ್ದರು.

ನಟ ಚಿರಂಜೀವಿ (Chiranjeevi) ಅವರಿಗೆ ಮೇ 9ರಂದು ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅವಾರ್ಡ್ ನೀಡಿದ್ದಾರೆ. ಆ ಬಳಿಕ ಔತಣಕೂಟ ಏರ್ಪಡಿಸಲಾಗಿತ್ತು. ಚಿರಂಜೀವಿ ಜೊತೆಗೆ ಪತ್ನಿ ಸುರೇಖಾ, ಮಗ ರಾಮ್ ಚರಣ್, ಸೊಸೆ ಉಪಾಸನಾ ಕೊನಿಡೆಲಾ ಕೂಡ ಈ ಔತಣಕೂಟದಲ್ಲಿ ಭಾಗಿ ಆಗಿದ್ದರು. ಚಿತ್ರರಂಗಕ್ಕೆ ಚಿರಂಜೀವಿ ಅವರು ನೀಡಿದ ಕೊಡುಗೆ ಆಧರಿಸಿ ಪದ್ಮ ವಿಭೂಷಣ ಪ್ರಶಸ್ತಿ ನೀಡಲಾಗಿದೆ. ಇದು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಖುಷಿ ನೀಡಿದೆ. ಚಿರಂಜೀವಿ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಕೆಲವು ವರ್ಷ ರಾಜಕೀಯದಲ್ಲಿಯೂ ಇದ್ದರು. ಆ ಬಳಿಕ ರಾಜಕೀಯ ತೊರೆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More