ಚಿರಂಜೀವಿ ಸರ್ಜಾ ಚಿತ್ರದಲ್ಲಿ ರಾಯನ್ ರಾಜ್ ಸರ್ಜಾ; ‘ರಾಜಮಾರ್ತಾಂಡ’ ರಿಲೀಸ್ಗಾಗಿ ವಿಶೇಷ ಹೋಮ
ಚಿರಂಜೀವಿ ಸರ್ಜಾ ಫ್ಯಾನ್ಸ್ ಕಾಯುತ್ತಿರುವ ‘ರಾಜಮಾರ್ತಾಂಡ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಚಿತ್ರತಂಡ ಹೋಮ ನೆರವೇರಿಸಿದೆ.
ಚಿರಂಜೀವಿ ಸರ್ಜಾ (Chiranjeevi Sarja) ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. 2020ರಲ್ಲಿ ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಈ ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಡಬ್ಬಿಂಗ್ ಕೆಲಸಗಳು ಬಾಕಿ ಉಳಿದಿದ್ದವು. ಅವರ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡುತ್ತಿದ್ದಾರೆ. ಈಗ ‘ರಾಜಮಾರ್ತಾಂಡ’ ಸಿನಿಮಾ (Rajamarthanda Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ವಿಶೇಷ ಹೋಮ ನೆರವೇರಿಸಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಅವರ ಪುತ್ರ ರಾಯನ್ ರಾಜ್ ಸರ್ಜಾ(Raayan Raj Sarja) ಕೂಡ ಕಾಣಿಸಿಕೊಳ್ಳಲಿದ್ದಾನೆ ಎಂಬ ಮಾಹಿತಿಯನ್ನು ಚಿತ್ರತಂಡ ನೀಡಿದೆ. ಆ ಕಾರಣದಿಂದಲ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವಂತಾಗಿದೆ. ‘ರಾಜಮಾರ್ತಾಂಡ’ ಚಿತ್ರಕ್ಕೆ ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ:
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

