ಚಿರಂಜೀವಿ ಸರ್ಜಾ ಚಿತ್ರದಲ್ಲಿ ರಾಯನ್ ರಾಜ್ ಸರ್ಜಾ; ‘ರಾಜಮಾರ್ತಾಂಡ’ ರಿಲೀಸ್ಗಾಗಿ ವಿಶೇಷ ಹೋಮ
ಚಿರಂಜೀವಿ ಸರ್ಜಾ ಫ್ಯಾನ್ಸ್ ಕಾಯುತ್ತಿರುವ ‘ರಾಜಮಾರ್ತಾಂಡ’ ಚಿತ್ರಕ್ಕೆ ಕೊನೇ ಹಂತದ ಕೆಲಸಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಚಿತ್ರತಂಡ ಹೋಮ ನೆರವೇರಿಸಿದೆ.
ಚಿರಂಜೀವಿ ಸರ್ಜಾ (Chiranjeevi Sarja) ನಟನೆಯ ‘ರಾಜಮಾರ್ತಾಂಡ’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ವಿಶೇಷ ನಿರೀಕ್ಷೆ ಇದೆ. 2020ರಲ್ಲಿ ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಚಿರಂಜೀವಿ ಸರ್ಜಾ ಅವರು ಈ ಸಿನಿಮಾದ ಶೂಟಿಂಗ್ ಮುಗಿಸಿದ್ದರು. ಡಬ್ಬಿಂಗ್ ಕೆಲಸಗಳು ಬಾಕಿ ಉಳಿದಿದ್ದವು. ಅವರ ಪಾತ್ರಕ್ಕೆ ಧ್ರುವ ಸರ್ಜಾ ಧ್ವನಿ ನೀಡುತ್ತಿದ್ದಾರೆ. ಈಗ ‘ರಾಜಮಾರ್ತಾಂಡ’ ಸಿನಿಮಾ (Rajamarthanda Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ವಿಶೇಷ ಹೋಮ ನೆರವೇರಿಸಿದೆ. ಈ ಸಿನಿಮಾದಲ್ಲಿ ಚಿರಂಜೀವಿ ಅವರ ಪುತ್ರ ರಾಯನ್ ರಾಜ್ ಸರ್ಜಾ(Raayan Raj Sarja) ಕೂಡ ಕಾಣಿಸಿಕೊಳ್ಳಲಿದ್ದಾನೆ ಎಂಬ ಮಾಹಿತಿಯನ್ನು ಚಿತ್ರತಂಡ ನೀಡಿದೆ. ಆ ಕಾರಣದಿಂದಲ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗುವಂತಾಗಿದೆ. ‘ರಾಜಮಾರ್ತಾಂಡ’ ಚಿತ್ರಕ್ಕೆ ರಾಮ್ ನಾರಾಯಣ್ ನಿರ್ದೇಶನ ಮಾಡಿದ್ದು, ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ.
ಇದನ್ನೂ ಓದಿ:
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

